HEALTH TIPS

ಕುಂಜತ್ತೂರಲ್ಲಿ ಭೀಕರ ರಸ್ತೆ ಅಪಘಾತ: ಮೂವರ ದಾರುಣ ಅಂತ್ಯ

                    ಮಂಜೇಶ್ವರ : ರಾಷ್ಟ್ರೀಯ ಹೆದ್ದಾರಿ ಕುಂಜತ್ತೂರಿನ ವಿರುದ್ಧ ದಿಕ್ಕಿನಲ್ಲಿ ಅಮಿತ ವೇಗದಲ್ಲಿ ಸಂಚರಿಸಿದ ಆಂಬ್ಯುಲೆನ್ಸ್ ಎದುರಿನಿಂದ ಬರುತಿದ್ದ ಕಾರೊಂದಕ್ಕೆ ಡಿಕ್ಕಿ ಹೊಡೆದು ಉಂಟಾದ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ದಾರುಣವಾಗಿ ಸಾವನ್ನಪ್ಪಿದ್ದಾರೆ.

                        ಕುಂಜತ್ತೂರು ಜಂಕ್ಷನ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಬೆಳಿಗ್ಗೆ 10-50 ರ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ.

                      ಬೆಂಗಳೂರಿನಿಂದ ತ್ರಿಶೂರು ಭಾಗಕ್ಕೆ ಕಾರಿನಲ್ಲಿ ಸಂಚರಿಸುತಿದ್ದ ಗುರುವಾಯೂರು ನಿವಾಸಿಗಳಾದ ಪಿ.ಶಿವಕುಮಾರ್(54), ಶರತ್ ಮೆನೋನ್ (23) ಹಾಗೂ ಸೌರವ್(15)  ಸಾವನ್ನಪ್ಪಿದ್ದಾರೆ.  ಅಪಘಾತದಿಂದ ಕಾರು ಪೂರ್ಣ ನುಜ್ಜು ಗುಜ್ಜಾಗಿದ್ದು ಊರವರ ಹಾಗೂ ಅಗ್ನಿಶಾಮಕದಳ ಮತ್ತು ಪೋಲೀಸರ ಜಂಟಿ ಕಾರ್ಯಾಚರಣೆಯಿಂದ ಕಾರಿನೊಳಗಿದ್ದವರನ್ನು ಹೊರ ತೆಗೆದು ಮಂಗಲ್ಪಾಡಿ ಶವಗಾರಕ್ಕೆ ಕೊಂಡೊಯ್ಯಲಾಗಿದೆ.


                        ಸೋಮವಾರ  ಕಾಸರಗೋಡು ಚಟ್ಟಂಚ್ಬಾಲ್ ನಲ್ಲಿ ಅಪಘಾತಕ್ಕೀಡಾದ ಗಾಯಾಳು ಹಾಗೂ ಜೊತೆಗೆ ಇಬ್ಬರನ್ನು ಕಾಸರಗೋಡಿನ ಆಸ್ಪತ್ರೆಯಿಂದ ಮಂಗಳೂರು ಆಸ್ಪತ್ರೆಗೆ ಕೊಂಡೊಯ್ಯುವಾಗ ಆಂಬ್ಯುಲೆನ್ಸ್ ವಿರುದ್ಧ ದಿಕ್ಕಿನಲ್ಲಿ ಸಂಚರಿಸಿ ಅಪಘಾತ ಸಂಭವಿಸಿದೆ. ಆಂಬ್ಯುಲೆನ್ಸ್ ನಲ್ಲಿದ್ದವರು ಕೂಡಾ ಗಾಯಗೊಂಡಿದ್ದು ಅವರೆಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries