HEALTH TIPS

ಕಾಸರಗೋಡಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ

              ಕಾಸರಗೋಡು: ಕನ್ನಡ ಸಾಹಿತ್ಯ ಪರಿಷತ್ ಕೇರಳ ಗಡಿನಾಡ ಘಟಕದ ಆಶ್ರಯದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ 110 ನೇ ಸಂಸ್ಥಾಪನಾ ದಿನಾಚರಣೆಯು  ಕಾಸರಗೋಡಿನ ಸಾಹಿತ್ಯ ಪರಿಷತ್ತು ಕಛೇರಿಯಲ್ಲಿ ನಡೆಯಿತು. 

            ಹಿರಿಯ ಸಾಹಿತಿ ವೈ.ಸತ್ಯನಾರಾಯಣ ಕಾಸರಗೋಡು ಸಮಾರಂಭ ಉದ್ಘಾಟಿಸಿದರು. ಕನ್ನಡ ಭಾಷೆ ಮತ್ತು ಕನ್ನಡಿಗರನ್ನು ಬೆಸೆಯುವಲ್ಲಿ, ಸಾಹಿತ್ಯ ಪರಿಷತ್ತಿನ ಕೊಡುಗೆ ಅಪಾರವಾದುದು ಎಂದು ಅವರು ಹೇಳಿದರು. 

         ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ಅಧ್ಯಕ್ಷ ಡಾ.ಜಯಪ್ರಕಾಶ ನಾರಾಯಣ ತೊಟ್ಟೆತ್ತೋಡಿ ಅಧ್ಯಕ್ಷತೆ ವಹಿಸಿದ್ದರು. ಮೀಯಪದವು ಶ್ರೀ ವಿದ್ಯಾವರ್ಧಕ ಹೈಯರ್ ಸೆಕಂಡರಿ ಶಾಲೆಯ ಮುಖ್ಯ ಶಿಕ್ಷಕ ರಾಜಾರಾಮ ರಾವ್ 'ಜನಸಾಮಾನ್ಯರತ್ತ  ಕನ್ನಡ ಸಾಹಿತ್ಯ ಪರಿಷತ್ತು' ಎಂಬ ವಿಷಯದ ಕುರಿತು ಉಪನ್ಯಾಸ ನೀಡಿ, ಕನ್ನಡ ಸಾಹಿತ್ಯ ಪರಿಷತ್ತಿನ ಹುಟ್ಟು, ಬೆಳೆದು ಬಂದ ದಾರಿ, ಜನಸಾಮಾನ್ಯರನ್ನು ತನ್ನತ್ತ ಸೆಳೆದ ಬಗೆಯನ್ನು ವಿವರಿಸಿದರು.

           ಮೀಯಪದವು  ಹೈಯರ್ ಸೆಕೆಂಡರಿ ಶಾಲೆಯ ಕನ್ನಡ ಪ್ರಾಧ್ಯಾಪಕ ಹರೀಶ.ಜಿ ಉಪಸ್ಥಿತರಿದ್ದರು.  ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿ ವೈ.ಸತ್ಯನಾರಾಯಣ ಕಾಸರಗೋಡು ಅವರನ್ನು ಅಭಿನಂದಿಸಲಾಯಿತು. 

           ದ.ಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತ ಅನುಜ್ಞಾ ಲಕ್ಷ್ಮಿ.ಪಿ ಮತ್ತು ಅನನ್ಯ.ಪಿ ನಾಡಗೀತೆ, ಭಾವಗೀತೆ,ಜಾನಪದ ಗೀತೆಗಳನ್ನು ಹಾಡಿದರು. ಪರಿಷತ್ತಿನ ಗೌರವ ಕಾರ್ಯದರ್ಶಿ ಶೇಖರ ಶೆಟ್ಟಿ ಬಾಯಾರು ಸ್ವಾಗತಿಸಿದರು. ಸಂಘಟನಾ ಕಾರ್ಯದರ್ಶಿ ವಿಶಾಲಾಕ್ಷ ಪುತ್ರಕಳ ಕಾರ್ಯಕ್ರಮ ನಿರೂಪಿಸಿದರು. ಗೌ.ಕಾರ್ಯದರ್ಶಿ ಪ್ರದೀಪ್ ಕುಮಾರ್ ಶೆಟ್ಟಿ ವಂದಿಸಿದರು.  



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries