HEALTH TIPS

ಯಕ್ಷಗಾನ ಕಲಾವಿದ,ಪ್ರಸಂಗಕರ್ತ ಮಧೂರು ವೆಂಕಟಕೃಷ್ಣರಿಗೆ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಅಭಿನಂದನೆ

         ಮಧೂರು: ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ 'ಸಾಹಿತ್ಯಪರಿಷತ್ತಿನ ನಡಿಗೆ,ಹಿರಿಯ ಸಾಧಕರ ಎಡೆಗೆ' ಕಾರ್ಯಕ್ರಮದಂಗವಾಗಿ ಯಕ್ಷಗಾನ ಕಲಾವಿದ, ಪ್ರಸಂಗ ಕರ್ತ,ಭಾಗವತ, ತಾಳಮದ್ದಲೆ ಅರ್ಥಧಾರಿ ಮಧೂರು ವೆಂಕಟಕೃಷ್ಣ ಅವರನ್ನು ಮಧೂರಿನ ಅವರ ನಿವಾಸದಲ್ಲಿ ಅಭಿನಂದಿಸಲಾಯಿತು.

             ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ಅಧ್ಯಕ್ಷ ಡಾ.ಜಯಪ್ರಕಾಶ ನಾರಾಯಣ ತೊಟ್ಟೆತ್ತೋಡಿ ಅವರು ವೆಂಕಟಕೃಷ್ಣ ದಂಪತಿಯರನ್ನು ಶಾಲುಹೊದೆಸಿ,ಫಲಪುಷ್ಪ,ಸ್ಮರಣಿಕೆ ನೀಡಿ ಅಭಿನಂದಿಸಿದರು.

               ಕರ್ನಾಟಕ ಯಕ್ಷಗಾನ ಅಕಾಡೆಮಿಯ ಮಾಜಿ ಸದಸ್ಯ ಯೋಗೀಶ ರಾವ್ ಚಿಗುರುಪಾದೆ ಅಭಿನಂದನಾ ಭಾಷಣ ಮಾಡಿದರು.ಹವ್ಯಾಸಿ ಯಕ್ಷಗಾನ ಕಲಾವಿದರಾಗಿ, ಪ್ರಸಂಗಕರ್ತರಾಗಿ, ತಾಳಮದ್ದಲೆ ಅರ್ಥಧಾರಿಯಾಗಿ, ಕನ್ನಡ ತುಳು ಭಕ್ತಿಗೀತೆಗಳ ಗೀತ ರಚನಗಾರರಾಗಿ, ತಾಳಮದ್ದಲೆ ಸಂಘಟಕರಾಗಿ ಮಧೂರು ವೆಂಕಟಕೃಷ್ಣರು ನೀಡಿದ ಕೊಡುಗೆ  ಮಹತ್ತರವಾದುದು ಎಂದು ಅವರು ಹೇಳಿದರು.

                ನಿವೃತ್ತ ಪ್ರಾಂಶುಪಾಲ ಡಾ.ಕೆ.ಕಮಲಾಕ್ಷ, ಹಿರಿಯ ಸಾಹಿತಿ, ಪತ್ರಕರ್ತ ರಾಧಾಕೃಷ್ಣ.ಕೆ ಉಳಿಯತ್ತಡ್ಕ, ಯಕ್ಷಗಾನ ಭಾಗವತ ತಲ್ಪನಾಜೆ ವೆಂಕಟ್ರಮಣ ಭಟ್ ಅವರು ಮಧೂರು ವೆಂಕಟಕೃಷ್ಣ ಅವರ ವ್ಯಕ್ತಿತ್ವ, ಹಿರಿಮೆ ಮತ್ತು ಅವರ ಒಡನಾಟಗಳ ಕುರಿತು ಮಾತನಾಡಿದರು.

               ಮಧೂರು ವೆಂಕಟಕೃಷ್ಣ ಅವರು ಸನ್ಮಾನಕ್ಕೆ ಕೃತಜ್ಞತೆ ಸೂಚಿಸಿ ಮಾತನಾಡಿದರು.ಸುಮಿತ್ರಾ ವೆಂಕಟಕೃಷ್ಣ, ಸಂಧ್ಯಾ ಮುರಲೀ ಮಾಧವ ಉಪಸ್ಥಿತರಿದ್ದರು.

            ಸಾಹಿತ್ಯ ಪರಿಷತ್ತಿನ ಸಂಘಟನಾ ಕಾರ್ಯದರ್ಶಿ ವಿಶಾಲಾಕ್ಷ ಪುತ್ರಕಳ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ನ್ಯಾಯವಾದಿ ಥೋಮಸ್ ಡಿ'ಸೋಜ ಸೀತಾಂಗೋಳಿ ವಂದಿಸಿದರು. 





Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries