ಕೊಚ್ಚಿ: ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ವೈಯಕ್ತಿಕ ಭೇಟಿಗಾಗಿ ದುಬೈಗೆ ತೆರಳಿದ್ದಾರೆ. ಮುಖ್ಯಮಂತ್ರಿಗಳು ಬೆಳಗ್ಗೆ ನೆಡುಂಬಶ್ಶೇರಿ ವಿಮಾನ ನಿಲ್ದಾಣದಿಂದ ದುಬೈಗೆ ತೆರಳಿರುವರು.
ವೈಯಕ್ತಿಕ ಅಗತ್ಯತೆಗಳನ್ನು ಮುಂದಿಟ್ಟುಕೊಂಡು ಮುಖ್ಯಮಂತ್ರಿಗಳು ಪ್ರವಾಸಕ್ಕೆ ಅನುಮತಿ ಕೋರಿದ್ದರು. ಇದು ಖಾಸಗಿ ಭೇಟಿಯಾಗಿರುವುದರಿಂದ ಸರ್ಕಾರ ಅಧಿಕೃತ ಪತ್ರಿಕಾ ಪ್ರಕಟಣೆ ಹೊರಡಿಸಿಲ್ಲ.
ನಿನ್ನೆಷ್ಟೇ ಕೇಂದ್ರ ಸರ್ಕಾರ ವಿದೇಶ ಭೇಟಿಗೆ ಅನುಮತಿ ನೀಡಿತ್ತು. ಬಳಿಕ ಪ್ರವಾಸದ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಯಿತು. ಪುತ್ರನ ಕುಟುಂಬದೊಂದಿಗೆ ಕಳೆಯಲು ಪ್ರವಾಸ ತೆರಳಿರುವುದಾಗಿ ವಿವರಣೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ನಡೆಯಬೇಕಿದ್ದ ಸಾರ್ವಜನಿಕ ಕಾರ್ಯಕ್ರಮಗಳನ್ನು ಮುಂದೂಡಲಾಗಿದೆ. ಇವುಗಳಲ್ಲಿ ಕೆಲವನ್ನು ಮರುಜೋಡಣೆ ಮಾಡಲಾಗುವುದು ಎಂದು ವರದಿಯಾಗಿದೆ.