ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹಾಗೂ ಪತ್ನಿ ಸುನಿತಾ ಕೇಜ್ರಿವಾಲ್ ಅವರು ದೆಹಲಿಯ ಕನ್ನಾಟ್ ಪ್ಲೇಸ್ನಲ್ಲಿರುವ ಹನುಮಂತನ ದೇವಾಲಯಕ್ಕೆ ಇಂದು ( ಶನಿವಾರ) ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದ್ದಾರೆ.
0
samarasasudhi
ಮೇ 11, 2024
ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹಾಗೂ ಪತ್ನಿ ಸುನಿತಾ ಕೇಜ್ರಿವಾಲ್ ಅವರು ದೆಹಲಿಯ ಕನ್ನಾಟ್ ಪ್ಲೇಸ್ನಲ್ಲಿರುವ ಹನುಮಂತನ ದೇವಾಲಯಕ್ಕೆ ಇಂದು ( ಶನಿವಾರ) ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದ್ದಾರೆ.
ಈ ವೇಳೆ ಪಂಜಾಬ್ ಸಿಎಂ ಭಗವಂತ ಮಾನ್ ಹಾಗೂ ದೆಹಲಿ ಆರೋಗ್ಯ ಸಚಿವ ಸೌರಭ್ ಭಾರದ್ವಾಜ್ ಸೇರಿದಂತೆ ಎಎಪಿ ನಾಯಕರು ಉಪಸ್ಥಿತರಿದ್ದರು.
ಅರವಿಂದ ಕೇಜ್ರಿವಾಲ್ ಅವರು ಇಂದು ಪೂರ್ವ ಹಾಗೂ ದಕ್ಷಿಣ ದೆಹಲಿ ಲೋಕಸಭಾ ಕ್ಷೇತ್ರಗಳಲ್ಲಿ ರೋಡ್ ಶೋ ನಡೆಸಲಿದ್ದಾರೆ.
ಕೇಜ್ರಿವಾಲ್ ಅವರು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿ 50 ದಿನಗಳು ಕಳೆದ ನಂತರ ಮಧ್ಯಂತರ ಜಾಮೀನು ನೀಡಿರುವ ಸುಪ್ರೀಂ ಕೋರ್ಟ್, 21 ದಿನಗಳ ಕಾಲ ಚುನಾವಣಾ ಪ್ರಚಾರ ಕಾರ್ಯದಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಿದೆ.