ನವದೆಹಲಿ: 18ನೇ ಲೋಕಸಭೆಯ ಮೊದಲ ಅಧಿವೇಶನಕ್ಕೆ ಇಂಡಿಯಾ ಮೈತ್ರಿಕೂಟದ ನಾಯಕರು ಜೊತೆಯಾಗಿ ಸಂಸತ್ ಪ್ರವೇಶಿಸುವ ಮೂಲಕ ಒಗ್ಗಟ್ಟು ಪ್ರದರ್ಶಿಸಿದ್ದಾರೆ. ಈ ವೇಳೆ ಎಲ್ಲ ನಾಯಕರು ಸಂವಿಧಾನ ಪುಸ್ತಕವನ್ನು ಹಿಡಿದುಕೊಂಡಿದ್ದರು.
0
samarasasudhi
ಜೂನ್ 24, 2024
ನವದೆಹಲಿ: 18ನೇ ಲೋಕಸಭೆಯ ಮೊದಲ ಅಧಿವೇಶನಕ್ಕೆ ಇಂಡಿಯಾ ಮೈತ್ರಿಕೂಟದ ನಾಯಕರು ಜೊತೆಯಾಗಿ ಸಂಸತ್ ಪ್ರವೇಶಿಸುವ ಮೂಲಕ ಒಗ್ಗಟ್ಟು ಪ್ರದರ್ಶಿಸಿದ್ದಾರೆ. ಈ ವೇಳೆ ಎಲ್ಲ ನಾಯಕರು ಸಂವಿಧಾನ ಪುಸ್ತಕವನ್ನು ಹಿಡಿದುಕೊಂಡಿದ್ದರು.
ಸಂವಿಧಾನ ಉಳಿಸಲು ಜನರು ವಿರೋಧ ಪಕ್ಷಗಳನ್ನು ಬೆಂಬಲಿಸಿದ್ದಾರೆ ಎಂದು ಈ ಬಾರಿಯ ಚುನಾವಣಾ ಫಲಿತಾಂಶಗಳು ತೋರಿಸುತ್ತವೆ ಎಂದು 'ಇಂಡಿಯಾ' ನಾಯಕರು ಹೇಳಿದರು.
ಸುದ್ದಿಸಂಸ್ಥೆ ಎಎನ್ಐ ಜತೆ ಮಾತನಾಡಿದ ರಾಹುಲ್ ಗಾಂಧಿ, 'ಸಂವಿಧಾನ ಉಳಿಸಲು ನಾವು ಕಟಿಬದ್ಧರಾಗಿದ್ದೇವೆ. ಆದ್ದರಿಂದ ಪ್ರಮಾಣ ವಚನ ಸ್ವೀಕರಿಸುವ ಮುನ್ನ ಸಂವಿಧಾನ ಪುಸ್ತಕ ಹಿಡಿದಿದ್ದೇವೆ. ಯಾವ ಶಕ್ತಿಯು ಭಾರತದ ಸಂವಿಧಾನವನ್ನು ಮುಟ್ಟಲು ಸಾಧ್ಯವಿಲ್ಲ ಎಂಬ ಸಂದೇಶವನ್ನು ನಾವು ಸಾರುತ್ತಿದ್ದೇವೆ' ಎಂದರು.
ಇಂದು ಬೆಳಿಗ್ಗೆ 11 ಗಂಟೆಗೆ 18ನೇ ಲೋಕಸಭೆಯ ಮೊದಲ ಅಧಿವೇಶನ ಆರಂಭವಾಗಿದ್ದು, ಪ್ರಧಾನಿ ನರೇಂದ್ರ ಮೋದಿ, ಗೃಹಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ನೂತನವಾಗಿ ಆಯ್ಕೆಯಾದ ಸಂಸದರು ಪ್ರಮಾಣ ವಚನ ಸ್ವೀಕರಿಸಿದರು.
ಜೂನ್ 26ರಂದು ಲೋಕಸಭಾ ಸ್ಪೀಕರ್ ಆಯ್ಕೆ ನಡೆಯಲಿದ್ದು, 27ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉಭಯ ಸದನಗಳ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.
