ನವದೆಹಲಿ: ಲೋಕಸಭೆಯ ಹಂಗಾಮಿ ಸಭಾಧ್ಯಕ್ಷರನ್ನಾಗಿ ಏಳು ಬಾರಿಯ ಸಂಸದ, ಚುನಾವಣೆಗೂ ಮುನ್ನ ಬಿಜೆಪಿ ಸೇರಿದ್ದ ಬಿಜೆಡಿ ನಾಯಕ ಭರ್ತೃಹರಿ ಮಹ್ತಬ್ ಅವರನ್ನು ಆಯ್ಕೆ ಮಾಡಲಾಗಿದೆ.
0
samarasasudhi
ಜೂನ್ 21, 2024
ನವದೆಹಲಿ: ಲೋಕಸಭೆಯ ಹಂಗಾಮಿ ಸಭಾಧ್ಯಕ್ಷರನ್ನಾಗಿ ಏಳು ಬಾರಿಯ ಸಂಸದ, ಚುನಾವಣೆಗೂ ಮುನ್ನ ಬಿಜೆಪಿ ಸೇರಿದ್ದ ಬಿಜೆಡಿ ನಾಯಕ ಭರ್ತೃಹರಿ ಮಹ್ತಬ್ ಅವರನ್ನು ಆಯ್ಕೆ ಮಾಡಲಾಗಿದೆ.
ಆ ಮೂಲಕ ಲೋಕಸಭೆಯ ಅತ್ಯಂತ ಹಿರಿಯ ಸದಸ್ಯರನ್ನು ನೇಮಕ ಮಾಡುವ ಸಂಪ್ರದಾಯವನ್ನು ಮುರಿಯಲಾಗಿದೆ.
ಇದೇ 24ರಂದು ಆರಂಭವಾಗಲಿರುವ ಅಧಿವೇಶನದಲ್ಲಿ ಸಂಸದರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಹಂಗಾಮಿ ಸ್ಪೀಕರ್ ಅಬರಿಗೆ ನೆರವಾಗಲು ಎಂಟು ಬಾರಿಯ ಸಂಸದ ಸುರೇಶ್ ಅವರೊಂದಿಗೆ ಡಿಎಂಕೆಯ ಟಿ.ಆರ್.ಬಾಲು, ಬಿಜೆಪಿಯ ರಾಧಾ ಮೋಹನ್ ಸಿಂಗ್ ಮತ್ತು ಫಗ್ಗಾನ್ ಸಿಂಗ್ ಕುಲಸ್ತೆ ಮತ್ತು ಟಿಎಂಸಿಯ ತೃಣಮೂಲ ಕಾಂಗ್ರೆಸ್ನ ಸುದೀಪ್ ಬಂಡೋಪಾಧ್ಯಾಯ ಅವರನ್ನು ಆಯ್ಕೆ ಮಾಡಲಾಗಿದೆ.