HEALTH TIPS

ಕಾಂಚನಜುಂಗಾ ರೈಲು ಅಪಘಾತ: ಘಟನಾ ಸ್ಥಳಕ್ಕೆ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಭೇಟಿ

         ಕೋಲ್ಕತ್ತ: ಕಾಂಚನಜುಂಗಾ ಎಕ್ಸ್‌ಪ್ರೆಸ್‌ ರೈಲು ಅಪಘಾತಕ್ಕೀಡಾದ ಸ್ಥಳಕ್ಕೆ ಭೇಟಿ ನೀಡಿರುವ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್, ಪರಿಸ್ಥಿತಿ ಅವಲೋಕಿಸಿದ್ದಾರೆ.

            ಅಪಘಾತ ನಡೆದ ಸ್ಥಳಕ್ಕೆ ಹೋಗುವ ದಾರಿ ಕಿರಿದಾಗಿದ್ದು, ಬೈಕ್‌ನ ಹಿಂದೆ ಕೂತು ಅಶ್ವಿನಿ ವೈಷ್ಣವ್ ಘಟನಾ ಸ್ಥಳ ತಲುಪಿದ್ದಾರೆ.

                 ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ.


           ಇಂದು ಬೆಳಿಗ್ಗೆ ಪಶ್ವಿಮ ಬಂಗಾಳದ ಜಲಪಾಯ್‌ಗುರಿ ನಿಲ್ದಾಣದ ಸಮೀಪದ ರಂಗಪಾಣಿಯಲ್ಲಿ ಸಂಭವಿಸಿದ ಕಾಂಚನಜುಂಗಾ ಎಕ್ಸ್‌ಪ್ರೆಸ್ ರೈಲು ದುರಂತದಲ್ಲಿ 15 ಜನ ಮೃತಪಟ್ಟು, 60ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.

          ಘಟನೆಗೆ ಸಂಬಂಧಿಸಿದಂತೆ ತನಿಖೆ ಆರಂಭಿಸಿರುವ ರೈಲ್ವೆ ಮಂಡಳಿಯ ಅಧಿಕಾರಿಗಳು ಸಿಗ್ನಲ್‌ನಲ್ಲಿಯ ತಾಂತ್ರಿಕ ದೋಷದಿಂದ ಈ ಅಪಘಾತ ಸಂಭವಿಸಿರಬಹುದು ಎಂಬ ಸಂಗತಿಯನ್ನು ಪ್ರಾಥಮಿಕವಾಗಿ ಕಂಡುಕೊಂಡಿದ್ದಾರೆ.

             ಈ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ಮೃತರ ಸಂಬಂಧಿಕರಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ ₹2 ಲಕ್ಷ ಹಾಗೂ ಗಾಯಾಳುಗಳಿಗೆ ₹50,000 ಪರಿಹಾರ ನೀಡಲಾಗುವುದು ಎಂದು ಘೋಷಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries