HEALTH TIPS

ಸರಕು ಸಾಗಣೆ ಹಡಗಿನಲ್ಲಿದ್ದ 14 ಸಿಬ್ಬಂದಿ ರಕ್ಷಣೆ

           ಮುಂಬೈ: ಪ್ರತಿಕೂಲ ಹವಾಮಾನದಿಂದಾಗಿ ಮಹಾರಾಷ್ಟ್ರದ ಕರಾವಳಿಯಲ್ಲಿ ತೊಂದರೆಗೆ ಸಿಲುಕಿದ್ದ ಸರಕು ಸಾಗಣೆ ನೌಕೆಯೊಂದರ 14 ಸಿಬ್ಬಂದಿಯನ್ನು ಭಾರತೀಯ ಕರಾವಳಿ ಕಾಲುಪಡೆ (ಐಸಿಜಿ) ಯೋಧರು ಸಾಹಸಮಯ ಕಾರ್ಯಾಚರಣೆ ನಡೆಸಿ ಶುಕ್ರವಾರ ರಕ್ಷಿಸಿದ್ದಾರೆ.

            ಮಹಾರಾಷ್ಟ್ರದ ಕೊಂಕಣ ಭಾಗದಲ್ಲಿ ಕಳೆದ ಕೆಲ ದಿನಗಳಿಂದ ಪ್ರತಿಕೂಲ ಹವಾಮಾನ ಇದ್ದು, ಭಾರಿ ಮಳೆಯಾಗುತ್ತಿದೆ.

            ಜೆಎಸ್‌ಡಬ್ಲ್ಯು ಉದ್ಯಮ ಸಮೂಹಕ್ಕೆ ಸೇರಿದ 'ಜೆಎಸ್‌ಡಬ್ಲ್ಯು ರಾಯಗಡ' ಎಂಬ ನೌಕೆ, ಅಲಿಬಾಗ್‌ನಿಂದ ಒಂದು ನಾಟಿಕಲ್ ಮೈಲು ದೂರದಲ್ಲಿ ಅಲೆಗಳ ಹೊಡೆತಕ್ಕೆ ಸಿಲುಕಿ ಅರಬ್ಬಿ ಸಮುದ್ರದಲ್ಲಿ ಕೊಚ್ಚಿ ಹೋಗುತ್ತಿತ್ತು.

              ಈ ಹಡಗು ತೊಂದರೆಗೆ ಸಿಲುಕಿದ್ದ ಕುರಿತು, ಗಸ್ತಿನಲ್ಲಿದ್ದ ಭಾರತೀಯ ಕರಾವಳಿ ಕಾವಲುಪಡೆಯ 'ಐಸಿಜಿಎಸ್‌ ಸಂಕಲ್ಪ' ನೌಕೆ ಹಾಗೂ ಮುಂಬೈನಲ್ಲಿರುವ ಕಡಲ ರಕ್ಷಣಾ ಸಮನ್ವಯ ಕೇಂದ್ರಕ್ಕೆ ಸಂದೇಶ ರವಾನೆಯಾಗಿದೆ.

            ತಕ್ಷಣವೇ ಕಾರ್ಯಪ್ರವೃತ್ತರಾದ ಐಸಿಜಿ ಯೋಧರು, ಸರಕು ಸಾಗಣೆ ಹಡಗಿನಲ್ಲಿದ್ದ ಎಲ್ಲ 14 ಸಿಬ್ಬಂದಿಯ ರಕ್ಷಿಸಿ, ಅವರನ್ನು ಹೆಲಿಕಾಪ್ಟರ್‌ ಮೂಲಕ ಅಲಿಬಾಗ್ ತೀರಕ್ಕೆ ಕರೆತಂದಿದ್ದಾರೆ.

'ಮಹಾರಾಷ್ಟ್ರದ ಕರಾವಳಿಯಲ್ಲಿ ಸಮುದ್ರ ಪ್ರಕ್ಷುಬ್ಧಗೊಂಡಿತ್ತಲ್ಲದೇ, 'ಜೆಎಸ್‌ಡಬ್ಲ್ಯು ರಾಯಗಡ' ಹಡಗಿನ ಎಂಜಿನ್‌ ಕೊಠಡಿಯಲ್ಲಿ ನೀರು ನುಗ್ಗುತ್ತಿದ್ದ ಕಾರಣ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿತ್ತು. ಸಿಬ್ಬಂದಿಯನ್ನು ಏರ್‌ಲಿಫ್ಟ್‌ ಮಾಡುವುದು ನಮ್ಮ ಮುಂದಿದ್ದ ಏಕೈಕ ಆಯ್ಕೆಯಾಗಿತ್ತು' ಎಂದು ಐಸಿಜಿ ಅಧಿಕಾರಿಗಳು ಹೇಳಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries