ಸಿಂಗಪುರ: ಕಾಂಬೋಡಿಯಾದಲ್ಲಿ ಸೈಬರ್ ಅಪರಾಧ ಹಗರಣದಲ್ಲಿ ಸಿಲುಕಿದ್ದ 14 ಭಾರತೀಯರನ್ನು ರಕ್ಷಣೆ ಮಾಡಲಾಗಿದ್ದು, ಅವರನ್ನು ಸ್ವದೇಶಕ್ಕೆ ವಾಪಸ್ ಕಳುಹಿಸಲು ಯತ್ನಿಸಲಾಗುತ್ತಿದೆ ಎಂದು ಭಾರತೀಯ ರಾಯಭಾರ ಕಚೇರಿ ತಿಳಿಸಿದೆ.
0
samarasasudhi
ಜುಲೈ 22, 2024
ಸಿಂಗಪುರ: ಕಾಂಬೋಡಿಯಾದಲ್ಲಿ ಸೈಬರ್ ಅಪರಾಧ ಹಗರಣದಲ್ಲಿ ಸಿಲುಕಿದ್ದ 14 ಭಾರತೀಯರನ್ನು ರಕ್ಷಣೆ ಮಾಡಲಾಗಿದ್ದು, ಅವರನ್ನು ಸ್ವದೇಶಕ್ಕೆ ವಾಪಸ್ ಕಳುಹಿಸಲು ಯತ್ನಿಸಲಾಗುತ್ತಿದೆ ಎಂದು ಭಾರತೀಯ ರಾಯಭಾರ ಕಚೇರಿ ತಿಳಿಸಿದೆ.
ವಿದೇಶದಲ್ಲಿ ಕೆಲಸ ಕೊಡಿಸುವ ವಂಚನೆಯ ಜಾಲದ ಬಲೆಗೆ ಬಿದ್ದು, ಸೈಬರ್ ಅಪರಾಧ ಘಟನೆಗಳಲ್ಲಿ ಸಿಲುಕಿದ್ದ 650ಕ್ಕೂ ಹೆಚ್ಚು ಭಾರತೀಯರ ರಕ್ಷಣೆ ಮತ್ತು ಅವರನ್ನು ಸ್ವದೇಶಕ್ಕೆ ಕಳುಹಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ಕಾಂಬೋಡಿಯಾದಲ್ಲಿರುವ ಭಾರತದ ರಾಯಭಾರ ಕಚೇರಿ ತಿಳಿಸಿದೆ.
ಸೈಬರ್ ವಂಚನೆಯ ಜಾಲಕ್ಕೆ ಸಿಲುಕಿದ ಭಾರತೀಯರ ಕುರಿತು ಭಾರತದ ರಾಯಭಾರ ಕಚೇರಿಯು, ಕಾಂಬೋಡಿಯಾದ ಪೊಲೀಸರಿಗೆ ಮಾಹಿತಿ ನೀಡಿತ್ತು. ಸೈಬರ್ ಅಪರಾಧ ಚಟುವಟಿಕೆಗಳಿಂದ ರಕ್ಷಣೆ ಮಾಡಲಾಗಿರುವ ಭಾರತೀಯರನ್ನು ಸರ್ಕಾರೇತರ ಸಂಸ್ಥೆಯೊಂದು ನೋಡಿಕೊಳ್ಳುತ್ತಿದೆ ಎಂದು ಭಾರತೀಯ ದೂತವಾಸ ತಿಳಿಸಿದೆ.
ಕಾಂಬೋಡಿಯಾದಲ್ಲಿ ಭಾರತೀಯರ ರಕ್ಷಣೆಗಾಗಿ ದೂತವಾಸ ಕಚೇರಿ ಕಾರ್ಯಪ್ರವೃತ್ತವಾಗಿದೆ. ದೇಶದಲ್ಲಿ ಉದ್ಯೋಗ ನೀಡುವುದಾಗಿ ಆಮಿಷ ಒಡ್ಡುವ ಸಂದೇಶದ ಬಗ್ಗೆ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಅನುಮಾನಾಸ್ಪದವಾಗಿ ಕಂಡುಬರುವ ಘಟನೆಗಳ ಕುರಿತು ದೂತವಾಸ ಕಚೇರಿಗೆ ತಿಳಿಸುವಂತೆ ಸೂಚಿಸಲಾಗಿದೆ.