HEALTH TIPS

ಕಾರ್ಯಕರ್ತರು ಜಾತಿ ಸಂಘಟನೆಗಳಲ್ಲಿ ಸಕ್ರಿಯರಾಗುವಂತೆ ಕೆಪಿಸಿಸಿ ಸೂಚನೆ

                   ಬತ್ತೇರಿ: ತಳಮಟ್ಟದ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಸಮುದಾಯದ ಸಂಘಟನೆಗಳ ಉಸ್ತುವಾರಿ ವಹಿಸಿಕೊಂಡು ಪಕ್ಷಕ್ಕೆ ಬಲ ನೀಡಬೇಕು ಎಂದು ಕೆಪಿಸಿಸಿ ಮಾರ್ಗಸೂಚಿ ನಿರ್ದೇಶನ ನೀಡಿದೆ.

                      ಜಾತ್ಯತೀತತೆ ಹೇಳಿಕೊಂಡು ಜಾತಿ ಸಂಘಟನೆಗಳಿಂದ ದೂರವಾದರೆ ಬೇರೆ ರಾಜಕೀಯ ಸಂಘಟನೆಗಳು ಇದರ ಲಾಭ ಪಡೆಯುತ್ತವೆ ಎಂದು ಕೆಪಿಸಿಸಿ ಶಿಬಿರದಲ್ಲಿ ಮಂಡಿಸಿದ ನೀತಿ ದಾಖಲೆಯಲ್ಲಿ ಗಮನಸೆಳೆದಿದ್ದಾರೆ. ಎಲ್ಲಾ ಹಂತದ ನಾಯಕರು ರಾಜ್ಯದಲ್ಲಿ ಪಕ್ಷದ ಕೆಲಸಕ್ಕಾಗಿ ತಿಂಗಳಲ್ಲಿ ಕನಿಷ್ಠ ಒಂದು ದಿನವನ್ನು ಮೀಸಲಿಡಬೇಕು. ದತ್ತಿ ಸಂಸ್ಥೆಗಳು ಮತ್ತು ಗ್ರಂಥಾಲಯ,  ಕುಟುಂಬಶ್ರೀಗಳಲ್ಲಿ ಪಕ್ಷದ ಕಾರ್ಯಕರ್ತರ ಸಂಖ್ಯೆಯನ್ನು ಗಣನೆಗೆ ತೆಗೆದುಕೊಳ್ಳಬೇಕು. ಕುಟುಂಬ ಸಭೆಗಳು ಮತ್ತು ವಾಟ್ಸಾಪ್ ಗ್ರೂಪ್‍ಗಳ ಉಸ್ತುವಾರಿ ವಹಿಸಿರುವವರಿಂದ ಕೂಡ ಮಾಹಿತಿ ಸಂಗ್ರಹಿಸಬೇಕು. ಮುಂದಿನ ವಿಧಾನಸಭಾ ಚುನಾವಣೆಗೆ ಪ್ರಮುಖರ ಸಹಭಾಗಿತ್ವದಲ್ಲಿ ಅಭಿವೃದ್ಧಿ ವಿಚಾರ ಸಂಕಿರಣ ಮತ್ತಿತರ ಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು ಎಂದೂ ನೀತಿ ದಾಖಲೆಯಲ್ಲಿ ಸೂಚಿಸಲಾಗಿದೆ.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries