ಜೈಪುರ: ಅಪ್ರಾಪ್ತನ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿಯೊಬ್ಬು ಸಂಗಾನೇರ್ ತೆರೆದ ಜೈಲಿನಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
0
samarasasudhi
ಜುಲೈ 18, 2024
ಜೈಪುರ: ಅಪ್ರಾಪ್ತನ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿಯೊಬ್ಬು ಸಂಗಾನೇರ್ ತೆರೆದ ಜೈಲಿನಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸಲಾಗಿದೆ ಎಂದು ಮಾಲ್ಪುರ ಗೇಟ್ ಪೊಲೀಸ್ ಠಾಣೆಯ ಅಧಿಕಾರಿ ಹೇಮಂತ್ ಸಿಂಗ್ ತಿಳಿಸಿದ್ದಾರೆ.
43 ವರ್ಷದ ಅಂಕುರ್ ಪಾಡಿಯಾ ಎಂಬುವವನೇ ಆತ್ಮಹತ್ಯೆಗೆ ಶರಣಾದ ವ್ಯಕ್ತಿ. 2014ರಲ್ಲಿ ಕೋಟಾದಲ್ಲಿ 7 ವರ್ಷದ ಬಾಲಕನನ್ನು ಅಪಹರಿಸಿ ಕೊಲೆ ಮಾಡಿದ ಆರೋಪ ಸಾಬೀತಾಗಿ, 2018ರಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿದ್ದನು.
ಇದರ ವಿರುದ್ಧ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದನು. 2021ರಲ್ಲಿ ಹೈಕೋರ್ಟ್ ಅವರ ಶಿಕ್ಷೆಯನ್ನು ಜೀವಾವಧಿ ಶಿಕ್ಷೆಗೆ ಇಳಿಸಿತ್ತು. ಆದರೆ 25 ವರ್ಷಗಳ ಜೈಲು ಶಿಕ್ಷೆ ಅನುಭವಿಸಬೇಕು ಎಂದು ಆದೇಶಿಸಿತ್ತು.
ಕೆಲ ದಿನಗಳ ಹಿಂದೆ ಅವರನ್ನು ಬಿಕಾನೇರ್ನ ತೆರೆದ ಜೈಲಿಗೆ ಹಾಕಲಾಗಿತ್ತು.
ಹಗಲು ಸಮಯದಲ್ಲಿ ಜೈಲಿನ ಆವರಣದ ಒಳಗೆ ಕೆಲಸ ಮಾಡಿ , ಸಂಜೆ ಮೇಲೆ ಮರಳುವ ಅವಕಾಶ ಈ ಜೈಲಿನಲ್ಲಿದೆ.