HEALTH TIPS

ಕೆನಡಾದಲ್ಲಿದ್ದು ಭಾರತ ವಿರೋಧಿ ದುಷ್ಕೃತ್ಯ: ಕಠಿಣ ಕ್ರಮಕ್ಕೆ ಆಗ್ರಹ

           ವದೆಹಲಿ: 'ಕೆನಡಾದಲ್ಲಿ ಇದ್ದುಕೊಂಡು ಭಾರತ ವಿರೋಧಿ ಕೃತ್ಯ ನಡೆಸುವವರ ಮೇಲೆ ಕಠಿಣ ಕ್ರಮಕೈಗೊಳ್ಳಬೇಕು' ಎಂದು ಕೆನಡಾ ಸರ್ಕಾರಕ್ಕೆ ಭಾರತ ಒತ್ತಾಯಿಸಿದೆ.

           ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಿ ಜಸ್ಟಿನ್‌ ಟ್ರುಡೊರಿಗೆ ಕೊಲೆ ಬೆದರಿಕೆ ಹಾಕಿದ್ದ ಇಬ್ಬರ ವಿರುದ್ಧ ಕೆನಡಾ ಕ್ರಮಕೈಗೊಂಡಿದೆ ಎಂಬ ವರದಿಗೆ ಪ್ರತಿಕ್ರಿಯಿಸಿ ಈ ಹೇಳಿಕೆ ನೀಡಿದೆ.

          'ಭಾರತದ ನಾಯಕರು ಮತ್ತು ರಾಜತಾಂತ್ರಿಕರನ್ನು ಗುರಿಯಾಗಿಸಿ ಕೊಲೆ ಬೆದರಿಕೆ ಹಾಕುವವರ ವಿರುದ್ಧವೂ ಇಂತಹ ಕ್ರಮವನ್ನು ತೆಗೆದುಕೊಳ್ಳುತ್ತಿಲ್ಲ' ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಅವರು ಅಭಿಪ್ರಾಯಪಟ್ಟಿದ್ದಾರೆ.

                'ಭಾರತದ ನಾಯಕರು, ಸಂಸ್ಥೆಗಳು,ವಿಮಾನ ಸಂಸ್ಥೆಗಳು, ರಾಜತಾಂತ್ರಿಕರ ವಿರುದ್ಧ ಬೆದರಿಕೆ ಬಂದಾಗಲೂ ಇಂತಹುದೇ ಕ್ರಮ ಅಗತ್ಯ.ಕಠಿಣ ಕ್ರಮ ಜರುಗಿಸುವುದನ್ನು ನಾವು ನಿರೀಕ್ಷಿಸುತ್ತೇವೆ' ಎಂದು ಜೈಸ್ವಾಲ್ ಅವರು ಹೇಳಿದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries