ನವದೆಹಲಿ: ಟಿ-20 ವಿಶ್ವಕಪ್ ಗೆದ್ದ ಭಾರತ ತಂಡದ ಸದಸ್ಯರೊಂದಿಗೆ ನೆನಪಿನಲ್ಲಿ ಉಳಿಯುವಂಥ ಮಾತುಕತೆ ನಡೆಯಿತು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಅಲ್ಲದೆ ವಿಶ್ವಕಪ್ ಗೆದ್ದ ಅವರ ಅನುಭವದ ಬಗ್ಗೆ ಚರ್ಚೆ ಮಾಡಿದೆ ಎಂದು ಅವರು ನುಡಿದಿದ್ದಾರೆ.
0
samarasasudhi
ಜುಲೈ 05, 2024
ನವದೆಹಲಿ: ಟಿ-20 ವಿಶ್ವಕಪ್ ಗೆದ್ದ ಭಾರತ ತಂಡದ ಸದಸ್ಯರೊಂದಿಗೆ ನೆನಪಿನಲ್ಲಿ ಉಳಿಯುವಂಥ ಮಾತುಕತೆ ನಡೆಯಿತು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಅಲ್ಲದೆ ವಿಶ್ವಕಪ್ ಗೆದ್ದ ಅವರ ಅನುಭವದ ಬಗ್ಗೆ ಚರ್ಚೆ ಮಾಡಿದೆ ಎಂದು ಅವರು ನುಡಿದಿದ್ದಾರೆ.
'ನಮ್ಮ ಚಾಂಪಿಯನ್ಗಳೊಂದಿಗೆ ಒಂದು ಅದ್ಭುತ ಭೇಟಿ.
ವಿಶ್ವಕಪ್ ಗೆದ್ದ ಭಾರತ ತಂಡವು ಇಂದು ಬೆಳಿಗ್ಗೆ ಬಾರ್ಬಾಡೋಸ್ನ ಬ್ರಿಜ್ಟೌನ್ನಿಂದ ದೆಹಲಿಗೆ ಬಂದಿಳಿಯಿತು. ಬಳಿಕ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿತು. ಆಟಗಾರರು ಪ್ರಧಾನ ಮಂತ್ರಿಗಳ ನಿವಾಸದಲ್ಲಿ ಉಪಾಹಾರ ಸವಿದರು. ಸುಮಾರು ಎರಡು ಗಂಟೆಗಳು ಕಳೆದರು.
ವಿಡಿಯೊವೊಂದನ್ನು ಪ್ರಧಾನ ಮಂತ್ರಿ ಕಾರ್ಯಾಲಯವು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಆಟಗಾರರು ಕುಶಾಲು ಮಾತನಾಡುವುದು, ಪ್ರಧಾನಿ ಮೋದಿಯವರ ಸುತ್ತ ವೃತ್ತಾಕಾರದಲ್ಲಿ ಕುಳಿತಿರುವುದು ಕಾಣಬಹುದಾಗಿದೆ.
ನಾಯಕ ರೋಹಿತ್ ಶರ್ಮಾ ಪ್ರಧಾನಿಯವರ ಬಲಭಾಗದಲ್ಲಿ ಹಾಗೂ ಕೋಚ್ ರಾಹುಲ್ ದ್ರಾವಿಡ್ ಎಡಭಾಗದಲ್ಲಿ ಕುಳಿತಿರುವುದು ವಿಡಿಯೊದಲ್ಲಿದೆ.
ತಂಡದ ಸದಸ್ಯರೊಂದಿಗೆ ಪ್ರಧಾನಿ ಮೋದಿಯವರು ಫೋಟೊ ತೆಗೆಸಿಕೊಂಡಿದ್ದು, ಆಟಗಾರರು 'ಚಾಂಪಿಯನ್ಸ್' ಎಂದು ಬರೆದಿರುವ ಜೆರ್ಸಿ ತೊಟ್ಟಿದ್ದರು.
ಇದೇ ವೇಳೆ ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ ಹಾಗೂ ಕಾರ್ಯದರ್ಶಿ ಜಯ್ ಶಾ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭಾರತ ಕ್ರಿಕೆಟ್ ತಂಡದ ಜೆರ್ಸಿಯನ್ನು ಉಡುಗೊರೆಯಾಗಿ ನೀಡಿದರು. ಅದರಲ್ಲಿ 'ನಮೊ' ಎಂದು ಬರೆಯಾಲಾಗಿತ್ತು.