ರುದ್ರಪ್ರಯಾಗ: ಉತ್ತರಾಖಂಡದ ರುದ್ರಪ್ರಯಾಗ ಜಿಲ್ಲೆಯ ಕೇದಾರನಾಥ ಧಾಮಕ್ಕೆ ಸಾಗುವ ದಾರಿಯಲ್ಲಿ ಭಾನುವಾರ ಗುಡ್ಡಕುಸಿದು ಮೂವರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.
0
samarasasudhi
ಜುಲೈ 21, 2024
ರುದ್ರಪ್ರಯಾಗ: ಉತ್ತರಾಖಂಡದ ರುದ್ರಪ್ರಯಾಗ ಜಿಲ್ಲೆಯ ಕೇದಾರನಾಥ ಧಾಮಕ್ಕೆ ಸಾಗುವ ದಾರಿಯಲ್ಲಿ ಭಾನುವಾರ ಗುಡ್ಡಕುಸಿದು ಮೂವರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.
ಗೌರಿ ಕುಂಡ್- ಕೇದಾರನಾಥ ಮಾರ್ಗದ ಚಿರ್ಬಸಾ ಪ್ರದೇಶದ ಬಳಿ ಭಾನುವಾರ ಬೆಳಿಗ್ಗೆ 7.30ರ ಹೊತ್ತಿಗೆ ಭಾರಿ ಕಲ್ಲುಗಳಿಂದ ಕೂಡಿದ ಗುಡ್ಡ ಕುಸಿದಿದೆ.
ಈ ಕುರಿತು ಎಕ್ಸ್ನಲ್ಲಿ ಮಾಹಿತಿ ಹಂಚಿಕೊಂಡಿರುವ ಮುಖ್ಯಮಂತ್ರಿ ಪುಷ್ಕರ್ಸಿಂಗ್ ಧಾಮಿ, 'ಕೇದಾರನಾಥ ಯಾತ್ರೆಯ ಮಾರ್ಗದಲ್ಲಿ ಸಂಭವಿಸಿದ ದುರಂತ ವಿಷಾದನೀಯ. ರಕ್ಷಣಾ ತಂಡ ಕಾರ್ಯಾಚರಣೆಯನ್ನು ನಡೆಸುತ್ತಿದೆ. ಮೃತರ ಕುಟುಂಬಕ್ಕೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ' ಎಂದು ಬರೆದುಕೊಂಡಿದ್ದಾರೆ.