HEALTH TIPS

ಸರ್ವಪಕ್ಷ ಸಭೆ: ಬಿಹಾರ, ಆಂಧ್ರಕ್ಕೆ ವಿಶೇಷ ಸ್ಥಾನಮಾನ ನೀಡುವಂತೆ JDU,YSRCP ಆಗ್ರಹ

            ವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನಕ್ಕೆ ಮುನ್ನ ಭಾನುವಾರ ನಡೆದ ಸರ್ವಪಕ್ಷಗಳ ಸಭೆಯಲ್ಲಿ ಜೆಡಿಯು ಮತ್ತು ವೈಎಸ್‌ಆರ್‌ಸಿಪಿ ನಾಯಕರು ಕ್ರಮವಾಗಿ ಬಿಹಾರ, ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವಂತೆ ಒತ್ತಾಯಿಸಿದ್ದಾರೆ.

           ರಾಜ್ಯಗಳ ವಿಶೇಷ ಸ್ಥಾನಮಾನ ಬೇಡಿಕೆ ಕುರಿತು 'ಎಕ್ಸ್‌'ನಲ್ಲಿ ಪೋಸ್ಟ್‌ ಮಾಡಿರುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್‌, 'ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸರ್ವಪಕ್ಷಗಳ ಸಭೆಯಲ್ಲಿ, ಜೆಡಿಯು ನಾಯಕರು ಬಿಹಾರಕ್ಕೆ ವಿಶೇಷ ಸ್ಥಾನಮಾನ ನೀಡುವಂತೆ ಒತ್ತಾಯಿಸಿದರು.


             ಆದೇ ರೀತಿ ವೈಎಸ್‌ಆರ್‌ಸಿಪಿ ನಾಯಕರು ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನವನ್ನು ಒತ್ತಾಯಿಸಿದರು. ವಿಚಿತ್ರವೆಂದರೆ, ಟಿಡಿಪಿ ನಾಯಕರು ಈ ವಿಷಯದ ಬಗ್ಗೆ ಮೌನವಾಗಿದ್ದರು' ಎಂದು ವ್ಯಂಗ್ಯವಾಡಿದ್ದಾರೆ.

            ನರೇಂದ್ರ ಮೋದಿ ನೇತೃತ್ವದ ಸರ್ಕಾರ ರಚನೆಯಲ್ಲಿ ತಾನು ವಹಿಸಿರುವ ಪ್ರಮುಖ ಪಾತ್ರದ ಬಗ್ಗೆ ಉಲ್ಲೇಖಿಸಿರುವ ಜೆಡಿಯು, ಬಿಹಾರ ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡುವ ಬಗ್ಗೆ ಅಥವಾ ವಿಶೇಷ ಪ್ಯಾಕೇಜ್ ನೀಡುವ ಬಗ್ಗೆ ಪರಿಶೀಲನೆ ನಡೆಸಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ಬಗ್ಗೆ ಈಚೆಗೆ ನಿರ್ಣಯ ಕೈಗೊಂಡಿತ್ತು.

              ಇತ್ತ ಆಂಧ್ರಪ್ರದೇಶಕ್ಕೂ ವಿಶೇಷ ಸ್ಥಾನಮಾನ ನೀಡುವಂತೆ ಎನ್‌ಡಿಎ ಮಿತ್ರಪಕ್ಷವಾದ ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕರು ಆಗ್ರಹಿಸುತ್ತಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries