HEALTH TIPS

ಜಾರ್ಖಂಡ್‌: 18 ಬಿಜೆಪಿ ಶಾಸಕರು ವಿಧಾನಸಭೆಯಿಂದ ಅಮಾನತು

             ರಾಂಚಿ: ಜಾರ್ಖಂಡ್‌ನ 18 ಬಿಜೆಪಿ ಶಾಸಕರನ್ನು ನಾಳೆ ( ಆಗಸ್ಟ್‌2) 2ಗಂಟೆಯವರೆಗೆ ವಿಧಾನಸಭೆಯಿಂದ ಅಮಾನತುಗೊಳಿಸಲಾಗಿದ್ದು, ಮಾರ್ಷಲ್‌ಗಳ ಸಹಾಯದಿಂದ ಶಾಸಕರನ್ನು ಇಂದು (ಗುರುವಾರ) ಸದನದಿಂದ ಹೊರಗೆ ಕಳುಹಿಸಲಾಗಿದೆ.

            ನಿನ್ನೆ ವಿರೋಧ ಪಕ್ಷದ ಶಾಸಕರನ್ನು ಸದನದಿಂದ ಹೊರಗೆ ಕಳುಹಿಸಿದ್ದರ ವಿರುದ್ಧ ಸದನದಲ್ಲಿ ಗದ್ದಲವನ್ನು ಸೃಷ್ಟಿಸುವ ಮೂಲಕ ಸದನಕ್ಕೆ ಅಡ್ಡಿಪಡಿಸಿದ ಕಾರಣದಿಂದಾಗಿ ಸ್ಪೀಕರ್ ರವೀಂದ್ರ ನಾಥ್ ಮಹ್ತೋ ಅವರು ಬಿಜೆಪಿ ಸದಸ್ಯರ ವಿರುದ್ಧ ಕ್ರಮ ಕೈಗೊಂಡಿದ್ದಾರೆ.

          ಮುಖ್ಯಮಂತ್ರಿ ಹೇಮಂತ್‌ ಸೊರೇನ್ ಅವರು ಉದ್ಯೋಗ ಸೇರಿದಂತೆ ಇನ್ನಿತರೆ ಸಮಸ್ಯೆಗಳ ಕುರಿತ ವಿರೋಧ ಪಕ್ಷಗಳ ಪ್ರಶ್ನೆಗಳಿಗೆ ಉತ್ತರಿಸಲಿಲ್ಲವೆಂದು ಸದನದಲ್ಲಿ ಪ್ರತಿಭಟನೆಯ ಕಾವು ಹೆಚ್ಚಾಗಿತ್ತು.

                 ಅಧಿವೇಶನ ಆರಂಭಕ್ಕೂ ಮುನ್ನ ಬಿಜೆಪಿ ಶಾಸಕರು ಸದನದ ಬಾವಿಗೆ ಇಳಿದು ಮುಖ್ಯಮಂತ್ರಿ ಹೇಮಂತ್ ಸೊರೇನ್ ರಾಜೀನಾಮೆಗೆ ಆಗ್ರಹಿಸಿ ಘೋಷಣೆಗಳನ್ನು ಕೂಗಿದರು ಹಾಗೂ ಕೆಲವು ದಾಖಲೆಗಳನ್ನು ಹರಿದು ಹಾಕಿದ್ದಾರೆ. ಈ ವೇಳೆ ಆಡಳಿತ ಮತ್ತು ವಿರೋಧ ಪಕ್ಷಗಳ ಸದಸ್ಯರು ತೀವ್ರ ಮಾತಿನ ಜಟಾಪಟಿಗೆ ಮುಂದಾದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries