ನವದೆಹಲಿ: ವಯನಾಡ್ ಸಂತ್ರಸ್ತರು ಮತ್ತು ಅವರ ಕುಟುಂಬಗಳಿಗೆ ಕ್ಲೈಮ್ ಮೊತ್ತವನ್ನು ತ್ವರಿತವಾಗಿ ನೀಡುವಂತೆ ಭಾರತೀಯ ಜೀವ ವಿಮಾ ನಿಗಮ (ಎಲ್ಐಸಿ) ಸೇರಿದಂತೆ ಸಾರ್ವಜನಿಕ ವಲಯದ ವಿಮಾ ಕಂಪನಿಗಳಿಗೆ ಹಣಕಾಸು ಸಚಿವಾಲಯ ಶನಿವಾರ ಸೂಚನೆ ನೀಡಿದೆ.
0
samarasasudhi
ಆಗಸ್ಟ್ 04, 2024
ನವದೆಹಲಿ: ವಯನಾಡ್ ಸಂತ್ರಸ್ತರು ಮತ್ತು ಅವರ ಕುಟುಂಬಗಳಿಗೆ ಕ್ಲೈಮ್ ಮೊತ್ತವನ್ನು ತ್ವರಿತವಾಗಿ ನೀಡುವಂತೆ ಭಾರತೀಯ ಜೀವ ವಿಮಾ ನಿಗಮ (ಎಲ್ಐಸಿ) ಸೇರಿದಂತೆ ಸಾರ್ವಜನಿಕ ವಲಯದ ವಿಮಾ ಕಂಪನಿಗಳಿಗೆ ಹಣಕಾಸು ಸಚಿವಾಲಯ ಶನಿವಾರ ಸೂಚನೆ ನೀಡಿದೆ.
ಎಲ್ಐಸಿ, ನ್ಯಾಷನಲ್ ಇನ್ಶುರೆನ್ಸ್ ಕಾರ್ಪೊರೇಷನ್, ನ್ಯೂ ಇಂಡಿಯಾ ಅಶ್ಯೂರೆನ್ಸ್, ಓರಿಯಂಟಲ್ ಇನ್ಶುರೆನ್ಸ್ ಮತ್ತು ಯುನೈಟೆಡ್ ಇಂಡಿಯಾ ಇನ್ಶುರೆನ್ಸ್ ಸೇರಿದಂತೆ ಸಾರ್ವಜನಿಕ ವಲಯದ ವಿಮಾ ಕಂಪನಿಗಳು(ಪಿಎಸ್ಐಸಿ) ಎಲ್ಲಾ ಸಂಭಾವ್ಯ ಬೆಂಬಲವನ್ನು ನೀಡುವುದು ಕಡ್ಡಾಯ. ಸಂತ್ರಸ್ತರಿಗೆ ವಿಮಾ ಹಕ್ಕುಗಳನ್ನು ತ್ವರಿತವಾಗಿ ನೀಡಬೇಕು ಎಂದು ಸಚಿವಾಲಯ ಹೇಳಿದೆ.
Wayanad Landslide | ಭೂಕುಸಿತ: ಇನ್ನೂ 300 ಜನರು ನಾಪತ್ತೆಸಂತ್ರಸ್ತರಿಗೆ ಅಗತ್ಯ ಬೆಂಬಲ ನೀಡಲು ಕೇಂದ್ರ ಸರ್ಕಾರ ಮತ್ತು ಹಣಕಾಸು ಸಚಿವಾಲಯ ಬದ್ಧವಾಗಿದೆ. ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಭೀಮಾ ಯೋಜನೆ ಅಡಿಯಲ್ಲಿ ಪಾಲಿಸಿದಾರರಿಗೆ ಸಂಬಂಧಿಸಿದಂತೆ ಕ್ಲೈಮ್ ಮೊತ್ತವನ್ನು ತ್ವರಿತವಾಗಿ ವಿತರಿಸಲು ಎಲ್ಐಸಿಗೆ ತಿಳಿಸಲಾಗಿದೆ. ಅಲ್ಲದೇ ಕ್ಲೈಮ್ ಮೊತ್ತದ ತ್ವರಿತ ವಿತರಣೆಗಾಗಿ ಪ್ರಕ್ರಿಯೆಗೆ ಅಗತ್ಯವಾದ ದಾಖಲಾತಿ ಸಲ್ಲಿಕೆಯನ್ನೂ ಸಡಿಲಿಸಲಾಗಿದೆ ಎಂದು ಅದು ಹೇಳಿದೆ.