HEALTH TIPS

ಹಿಂಸಾಚಾರ ತನಿಖೆಗೆ ವಿಶ್ವಸಂಸ್ಥೆ ಸಹಕಾರ ಕೋರಿದ ಬಾಂಗ್ಲಾ ಪ್ರಧಾನಿ ಹಸೀನಾ

           ಢಾಕಾ: ಮಿಸಲಾತಿ ವಿರೋಧಿಸಿ ಈಚೆಗೆ ಬಾಂಗ್ಲಾದೇಶದಾದ್ಯಂತ ನಡೆದ ಹಿಂಸಾಚಾರದ ಕುರಿತು ತನಿಖೆ ನಡೆಸಲು ವಿಶ್ವಸಂಸ್ಥೆ ಮತ್ತು ಇತರ ಅಂತರರರಾಷ್ಟ್ರೀಯ ಸಂಸ್ಥೆಗಳಿಂದ ಪ್ರಧಾನಿ ಶೇಕ್‌ ಹಸೀನಾ ಅವರು ಬುಧವಾರ ಸಹಕಾರ ಕೋರಿದರು.

          1971ರಲ್ಲಿ ಬಾಂಗ್ಲಾದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಸೇನಾ ಸಿಬ್ಬಂದಿಯ ಮಕ್ಕಳು ಮತ್ತು ಸಂಬಂಧಿಕರಿಗೆ ಸರ್ಕಾರಿ ನೇಮಕಾತಿಗಳಲ್ಲಿ ನೀಡಲಾಗಿದ್ದ ಶೇ30ರಷ್ಟು ಕೋಟಾವನ್ನು ಕೊನೆಗೊಳಿಸಬೇಕೆಂದು ವಿದ್ಯಾರ್ಥಿಗಳು ರಾಷ್ಟ್ರವ್ಯಾಪಿ ತೀವ್ರ ಪ್ರತಿಭಟನೆ ನಡೆಸಿದರು.

ಈ ವೇಳೆ ನಡೆದ ಹಿಂಸಾಚಾರದಲ್ಲಿ 100ಕ್ಕೂ ಅಧಿಕ ಮಂದಿ ಸಾವಿಗೀಡಾಗಿದ್ದರು.

             ಈ ಬಗ್ಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಹಸೀನಾ, 'ಹಿಂಸಾಚಾರದಲ್ಲಿ ಭಾಗಿಯಾದ ನಿಜವಾದ ಅಪಾರಾಧಿಗಳನ್ನು ಶಿಕ್ಷಿಸಲು ಮತ್ತು ಅದರ ಕುರಿತು ತನಿಖೆ ನಡೆಸಲು ನಾವು ವಿಶ್ವಸಂಸ್ಥೆ ಹಾಗೂ ಇತರ ಸಂಸ್ಥೆಗಳ ಸಹಕಾರವನ್ನು ಬಯಸುತ್ತೇವೆ. ದೇಶದ ಆಸ್ತಿ‍ಗಳಿಗೆ ಹಾನಿ ಮಾಡಿ, ನೂರಾರು ಜನರನ್ನು ಕೊಂದು ದೇಶದ ಗೌರವಕ್ಕೆ ಧಕ್ಕೆ ಉಂಟುಮಾಡಿದ್ದಾರೆ. ಈ ರಕ್ತಪಾತದಿಂದ ಯಾರು ಏನು ಗಳಿಸಿದರು ಎಂಬುದೇ ನನ್ನ ಪ್ರಶ್ನೆ' ಎಂದರು.

               ಪಾಕಿಸ್ತಾನದ ಕೆಲ ಗುಂ‍ಪುಗಳ ಪಿತೂರಿಯಿಂದಾಗಿ ಬಾಂಗ್ಲಾದೇಶಕ್ಕೆ ಮತ್ತೆ ಹಿನ್ನಡೆ ಆಗುತ್ತಿದೆ. ಇದು ಅತ್ಯಂತ ನೋವಿನ ಮತ್ತು ವಿಷಾದನೀಯ ಸಂಗತಿಯಾಗಿದೆ ಎಂದು ಆರೋಪಿಸಿದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries