HEALTH TIPS

ವಯನಾಡಿಗೆ ,ಇಂದು ಮೋದಿ ಭೇಟಿ: ಪರಿಹಾರ, ಪುನರ್ವಸತಿ ಪರಿಶೀಲನೆ

  ವದೆಹಲಿ: ಕೇರಳದ ಭೂಕುಸಿತ ಪೀಡಿತ ವಯನಾಡು ಜಿಲ್ಲೆಗೆ ,ಇಂದು (ಶನಿವಾರ) ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡಲಿದ್ದು, ಪರಿಹಾರ ಮತ್ತು ಪುನರ್ವಸತಿ ಕಾರ್ಯಗಳನ್ನು ಪರಿಶೀಲನೆ ನಡೆಸಲಿದ್ದಾರೆ ಎಂದು ವರದಿಯಾಗಿದೆ.

ಮೋದಿ ಅವರು ,ಇಂದು ಬೆಳಿಗ್ಗೆ 11 ಗಂಟೆಗೆ ಕಣ್ಣೂರು ತಲುಪಲಿದ್ದಾರೆ.

ಅಲ್ಲಿಂದ ಅವರು ವಯನಾಡಿನಲ್ಲಿ ಭೂಕುಸಿತ ಪೀಡಿತ ಪ್ರದೇಶದ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಮಧ್ಯಾಹ್ನ 12:15ರ ಸುಮಾರಿಗೆ ಭೂಕುಸಿತ ಪೀಡಿತ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮತ್ತು ಪುನರ್ವಸತಿ ಕಾರ್ಯಗಳ ಬಗ್ಗೆ ರಕ್ಷಣಾ ಪಡೆಗಳಿಂದ ಮಾಹಿತಿ ಪಡೆಯಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ನಿರಾಶ್ರಿತರ ಶಿಬಿರ ಮತ್ತು ಆಸ್ಪತ್ರೆಗೆ ಭೇಟಿ ನೀಡಲಿದ್ದು, ಸಂತ್ರಸ್ತರೊಂದಿಗೆ ಸಂವಾದ ನಡೆಸಲಿದ್ದಾರೆ. ನಂತರ ಮೋದಿ ಅವರು ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿದುಬಂದಿದೆ.

ಈಚೆಗೆ ವಯನಾಡು ಜಿಲ್ಲೆಯಲ್ಲಿ ಸಂಭವಿಸಿದ ಸರಣಿ ಭೂಕುಸಿತ ದುರಂತದಲ್ಲಿ 300ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದು, ನೂರಾರು ಜನರು ಗಾಯಗೊಂಡಿದ್ದಾರೆ, 300ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries