ನವದೆಹಲಿ: ಇತರೆ ಹಿಂದುಳಿದ ವರ್ಗಗಳ (ಒಬಿಸಿ) ಪಟ್ಟಿಗೆ ಹೊಸದಾಗಿ ಸೇರಿಸಿರುವ ಜಾತಿಗಳ ಸಾಮಾಜಿಕ ಮತ್ತು ಆರ್ಥಿಕ ಹಿಂದುಳಿದಿರುವಿಕೆ ಹಾಗೂ ಸಾರ್ವಜನಿಕ ವಲಯದ ಉದ್ಯೋಗಗಳಲ್ಲಿ ಅವರ ಕಡಿಮೆ ಪ್ರಾತಿನಿಧ್ಯದ ಬಗ್ಗೆ ದತ್ತಾಂಶ ಒದಗಿಸುವಂತೆ ಸುಪ್ರೀಂ ಕೋರ್ಟ್, ಸೋಮವಾರ ಪಶ್ಚಿಮ ಬಂಗಾಳ ಸರ್ಕಾರವನ್ನು ಕೇಳಿಕೊಂಡಿದೆ.
0
samarasasudhi
ಆಗಸ್ಟ್ 06, 2024
ನವದೆಹಲಿ: ಇತರೆ ಹಿಂದುಳಿದ ವರ್ಗಗಳ (ಒಬಿಸಿ) ಪಟ್ಟಿಗೆ ಹೊಸದಾಗಿ ಸೇರಿಸಿರುವ ಜಾತಿಗಳ ಸಾಮಾಜಿಕ ಮತ್ತು ಆರ್ಥಿಕ ಹಿಂದುಳಿದಿರುವಿಕೆ ಹಾಗೂ ಸಾರ್ವಜನಿಕ ವಲಯದ ಉದ್ಯೋಗಗಳಲ್ಲಿ ಅವರ ಕಡಿಮೆ ಪ್ರಾತಿನಿಧ್ಯದ ಬಗ್ಗೆ ದತ್ತಾಂಶ ಒದಗಿಸುವಂತೆ ಸುಪ್ರೀಂ ಕೋರ್ಟ್, ಸೋಮವಾರ ಪಶ್ಚಿಮ ಬಂಗಾಳ ಸರ್ಕಾರವನ್ನು ಕೇಳಿಕೊಂಡಿದೆ.
ಕಲ್ಕತ್ತಾ ಹೈಕೋರ್ಟ್ ತೀರ್ಪಿನ ವಿರುದ್ಧ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆ.ಬಿ.ಪಾರ್ದೀವಾಲಾ ಹಾಗೂ ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು ನಡೆಸುತ್ತಿದೆ.
ಬಂಗಾಳದಲ್ಲಿ 2010ರ ಬಳಿಕ ಮುಸ್ಲಿಮರೂ ಒಳಗೊಂಡಂತೆ ಹಲವು ಸಮುದಾಯಗಳಿಗೆ ನೀಡಿದ್ದ ಒಬಿಸಿ ಸ್ಥಾನಮಾನವನ್ನು ಕಲ್ಕತ್ತ ಹೈಕೋರ್ಟ್ ಮೇ 22ರಂದು ರದ್ದುಗೊಳಿಸಿತ್ತು.
ಈ ಜಾತಿಗಳನ್ನು ಒಬಿಸಿ ಪಟ್ಟಿಗೆ ಸೇರಿಸುವ ಮುನ್ನ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜತೆ ಸಮಾಲೋಚನೆ ನಡೆಸಿದ್ದರೆ, ಆ ಕುರಿತ ವಿವರಗಳ ಅಫಿಡವಿಟ್ ಸಲ್ಲಿಸುವಂತೆಯೂ ರಾಜ್ಯ ಸರ್ಕಾರವನ್ನು ಕೇಳಿದೆ. ಒಬಿಸಿಗೆ ಸೇರಿದ 77 ಜಾತಿಗಳ ಉಪವರ್ಗೀಕರಣದ ವೇಳೆ ನಡೆಸಿದ ಸಮೀಕ್ಷೆಯ ಸ್ವರೂಪದ ಬಗ್ಗೆ ಮಾಹಿತಿ ನೀಡುವಂತೆಯೂ ಪೀಠವು ಕೇಳಿಕೊಂಡಿತು.