HEALTH TIPS

ದುರಂತದ ನೆಲದಲ್ಲಿ ಕಳ್ಳರ ಕಾಟ

 ಯನಾಡ್‌: ವಯನಾಡ್‌ನಲ್ಲಿ ಭೂಕುಸಿತ ಸಂಭವಿಸಿದ ಗ್ರಾಮಗಳಲ್ಲಿನ ಜನರು ಪುನರ್ವಸತಿ ಕೇಂದ್ರಗಳಲ್ಲಿ ಆಶ್ರಯ ಪಡೆಯುತ್ತಿದ್ದಾರೆ. ಇತ್ತ ಹಾನಿಗೊಳಗಾದ ಮನೆಗಳಿಗೆ ಕಳ್ಳರು ನುಗ್ಗಿ ಅಳಿದುಳಿದ ವಸ್ತುಗಳನ್ನು ಕದ್ದೊಯ್ಯುತ್ತಿದ್ದಾರೆ ಎಂದು ಜನರು ದೂರಿದ್ದಾರೆ. ಈ ಹಿನ್ನೆಲೆ ಘಟನೆ ನಡೆದ ಸ್ಥಳಗಳಲ್ಲಿ ಪೊಲೀಸರು ಗಸ್ತು ತಿರುಗುತ್ತಿದ್ದಾರೆ.

ದುರಂತ ನಡೆದ ಸ್ಥಳದಲ್ಲಿ ಜನವಸತಿ ಇರದ ಕಾರಣ ಕಳ್ಳರು ಅದರ ಲಾಭ ಪಡೆದುಕೊಳ್ಳುತ್ತಿದ್ದಾರೆ. ಮನೆಯಲ್ಲಿನ ಮೌಲ್ಯಯುತ ವಸ್ತುಗಳು ಕಳ್ಳತನವಾಗುತ್ತಿವೆ. ಹೀಗಾಗಿ ಕ್ರಮ ಕೈಗೊಳ್ಳಬೇಕು ಎಂದು ಸಂತ್ರಸ್ತರು ಅಳಲು ತೋಡಿಕೊಂಡಿದ್ದಾರೆ.

'ಭೂಕುಸಿತದ ಸಂದರ್ಭದಲ್ಲಿ ಪ್ರಾಣ ರಕ್ಷಣೆಗಾಗಿ ಮನೆಗಳನ್ನು ತೊರೆದು ರೆಸಾರ್ಟ್‌ನಲ್ಲಿ ತಂಗಿದ್ದೇವೆ. ಆದರೆ ಪರಿಸ್ಥಿತಿ ಅವಲೋಕನಕ್ಕಾಗಿ ಮನೆಯ ಬಳಿ ತೆರಳಿದ್ದಾಗ ಬಾಗಿಲುಗಳು ಮುರಿದುಕೊಂಡಿತ್ತು, ಬಟ್ಟೆಗಳು ಹಾಗೂ ಕೆಲವು ವಸ್ತುಗಳು ನಾಪತ್ತೆಯಾಗಿವೆ' ಎಂದು ಸಂತ್ರಸ್ತರೊಬ್ಬರು ಹೇಳಿದ್ದಾರೆ.

ಚೂರಲ್‌ಮಲ, ಮುಂಡಕ್ಕೈ ಗ್ರಾಮಗಳಲ್ಲಿ ಅವಶೇಷಗಳಡಿ ಸಿಲುಕಿರುವ ಮೃತದೇಹಗಳ ಪತ್ತೆ ಕಾರ್ಯ ಮುಂದುವರಿದಿದ್ದು, ರಾತ್ರಿ ಹೊತ್ತು ಪೊಲೀಸರ ಅನುಮತಿಯಿಲ್ಲದೆ ಗ್ರಾಮಕ್ಕೆ ಯಾರಿಗೂ ಪ್ರವೇಶವಿಲ್ಲ. ಹೀಗಿದ್ದೂ ಕಳ್ಳತನ ಪ್ರಕರಣಗಳ ಬಗ್ಗೆ ದೂರು ಬಂದ ಹಿನ್ನೆಲೆ ರಾತ್ರಿ ವೇಳೆ ಗಸ್ತಿಗೆ ಆದೇಶಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries