HEALTH TIPS

ಆಯುಷ್ಮಾನ್‌ ಭಾರತ್‌ ಯೋಜನೆ ವಂಚನೆ: ಕಾಂಗ್ರೆಸ್ ಶಾಸಕ ಬಾಲಿ ನಿವಾಸದಲ್ಲಿ ಇ.ಡಿ ಶೋಧ

           ಶಿಮ್ಲಾ: ಆಯುಷ್ಮಾನ್‌ ಭಾರತ್‌ ಯೋಜನೆ ವಂಚನೆಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯವು (ಇ.ಡಿ) ಬುಧವಾರ ಹಿಮಾಚಲ ಪ್ರದೇಶದ ಕಾಂಗ್ರೆಸ್‌ ಶಾಸಕ ಆರ್‌.ಎಸ್ ಬಾಲಿ ಅವರ ನಿವಾಸ ಮತ್ತು ಕೆಲವು ಖಾಸಗಿ ಆಸ್ಪತ್ರೆಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿತು ಎಂದು ಅಧಿಕಾರಿಗಳು ತಿಳಿಸಿದರು.

          ಶಿಮ್ಲಾ, ಕಂಗಡಾ, ಉನಾ, ಮಂಡಿ ಮತ್ತು ಕುಲ್ಲು ಜಿಲ್ಲೆಗಳ 19 ಸ್ಥಳಗಳಲ್ಲಿ ಶೋಧ ನಡೆಸಲಾಯಿತು ಎಂದು ತಿಳಿಸಿದರು.

          ಬಾಲಿ ಅವರ ನಿವಾಸ, ಕಂಗಡಾದಲ್ಲಿರುವ ಫೋರ್ಟಿಸ್‌ ಆಸ್ಪತ್ರೆ, ಬಾಲಾಜಿ ಆಸ್ಪತ್ರೆ ಮತ್ತು ಇದರ ಪ್ರವರ್ತಕರಾದ ರಾಜೇಶ್‌ ಶರ್ಮಾ ಅವರ ನಿವಾಸದಲ್ಲಿ ಕಾರ್ಯಾಚರಣೆ ನಡೆಸಲಾಯಿತು ಎಂದರು.

ಅಧಿಕಾರಿಗಳ ಪ್ರಕಾರ, ಶರ್ಮಾ ಅವರು ಮುಖ್ಯಮಂತ್ರಿ ಸುಖ್ವಿಂದರ್‌ ಸಿಂಗ್ ಸುಖು ಅವರ ನಿಕಟವರ್ತಿ. ಇತ್ತೀಚೆಗೆ ದೆಹರಾ ಕ್ಷೇತ್ರದ ಉಪಚುನಾವಣೆ ಸಂದರ್ಭದಲ್ಲಿ ತಾವು ಪ್ರತಿನಿಧಿಸುತ್ತಿದ್ದ ಕ್ಷೇತ್ರವನ್ನು ಮುಖ್ಯಮಂತ್ರಿ ಪತ್ನಿ ಕಮಲೇಶ್ ಠಾಕೂರ್ ಅವರಿಗೆ ಬಿಟ್ಟುಕೊಟ್ಟಿದ್ದರು. ಅವರು ಚುನಾವಣೆಯಲ್ಲಿ ಗೆದ್ದರು.

               ಬಾಲಿ ಅವರು ಹಿಮಾಚಲ ಪ್ರದೇಶದ ಪ್ರವಾಸೋದ್ಯಮ ಇಲಾಖೆ ನಿಗಮದ ಮುಖ್ಯಸ್ಥರು ಮತ್ತು ಹಿಮಾಚಲ ಪ್ರದೇಶ ಪ್ರವಾಸೋದ್ಯಮ ಮಂಡಳಿಯ ಉಪಾಧ್ಯಕ್ಷರಾಗಿದ್ದಾರೆ.

ಆಯುಷ್ಮಾನ್‌ ಭಾರತ್ ಯೋಜನೆಯಡಿ ನಕಲಿ ಕಾರ್ಡುಗಳನ್ನು ಮಾಡಿಸಿದ ಆರೋಪದ ಮೇಲೆ ಕಿರಣ್‌ ಸೋನಿ, ಉನಾ ಮೂಲಕ ಶ್ರೀ ಬಂಕಿ ಬಿಹಾರಿ ಆಸ್ಪತ್ರೆ ಮತ್ತು ಇತರರ ಮೇಲೆ ಜುಲೈ 16ರಂದು ಹಣ ಅಕ್ರಮ ವರ್ಗಾವಣೆ ಪ್ರಕರಣ ದಾಖಲಾಗಿದೆ.

                   ಯೋಜನೆಯ ಕಾರ್ಡುಗಳನ್ನು ಬಳಸಿ ಅಂದಾಜು ₹25 ಕೋಟಿ ವಂಚನೆ ಮಾಡಲಾಗಿದೆ ಎಂದು ಇ.ಡಿ ಆರೋಪಿಸಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries