HEALTH TIPS

ಪ್ರೊಬೇಷನರಿ IAS ಅಧಿಕಾರಿ ಪೂಜಾ ಖೇಡ್ಕರ್‌ ಆಯ್ಕೆ ಅನೂರ್ಜಿತ: UPSCಯಿಂದ ಕ್ರಮ

         ವದೆಹಲಿ: ಮಹಾರಾಷ್ಟ್ರ ಕೇಡರ್‌ನ 2022ನೇ ಬ್ಯಾಚ್‌ನ ವಿವಾದಿತ ಐಎಎಸ್‌ ಪ್ರೊಬೇಷನರಿ ಅಧಿಕಾರಿ ಡಾ.ಪೂಜಾ ಖೇಡ್ಕರ್‌ ಅವರ ಆಯ್ಕೆಯನ್ನು ಕೇಂದ್ರ ಲೋಕಸೇವಾ ಆಯೋಗ ಇಂದು ಅನೂರ್ಜಿತಗೊಳಿಸಿದೆ.

         ಅಲ್ಲದೇ ಪೂಜಾ ಅವರಿಗೆ ಆಯೋಗ ನಡೆಸುವ ಯಾವುದೇ ಪರೀಕ್ಷೆಗಳಿಗೆ ಹಾಜರಾಗಲು ಅವಕಾಶ ಇಲ್ಲ ಎಂದು ಹೇಳಿದೆ.

           ಈ ಕುರಿತು ಆಯೋಗ ಮಾಹಿತಿ ನೀಡಿರುವುದಾಗಿ ಇಂಡಿಯಾ ಟುಡೇ ವೆಬ್‌ಸೈಟ್ ವರದಿ ಮಾಡಿದೆ.


             ಮಹಾರಾಷ್ಟ್ರದಲ್ಲಿ ಪ್ರೊಬೇಷನರಿ ಐಎಎಸ್ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಪೂಜಾ ಅವರನ್ನು ಅಂಗವೈಕಲ್ಯ ಹಾಗೂ ಒಬಿಸಿ ಕೋಟಾ ದುರುಪಯೋಗದ ಆರೋಪದ ಮೇಲೆ ವರ್ಗಾವಣೆ  ಮಾಡಲಾಗಿತ್ತು.

            ಈ ಕುರಿತು ಪೂಜಾ ಖೇಡ್ಕರ್‌ ವಿರುದ್ಧ ಕೇಂದ್ರ ಲೋಕಸೇವಾ ಆಯೋಗ ಪ್ರಕರಣ ದಾಖಲಿಸಿ ನಾಗರಿಕ ಸೇವಾ ಪರೀಕ್ಷೆ 2022ರ ನಿಯಮಗಳ ಅಡಿ ತನಿಖೆ ನಡೆಸಿತ್ತು. ತನಿಖೆಯಲ್ಲಿ ಅವರ ಮೇಲಿನ ಆರೋಪಗಳು ಸಾಬೀತಾಗಿರುವುದರಿಂದ ಅವರನ್ನು ಅನೂರ್ಜಿತಗೊಳಿಸಲಾಗಿದೆ ಎಂದು ವರದಿ ತಿಳಿಸಿದೆ.

            ಯುಪಿಎಸ್‌ಸಿಯ ಈ ಕ್ರಮದಿಂದ ಐಎಎಸ್ ಅಧಿಕಾರಿ ಪೂಜಾ ಇದೀಗ ಕೆಲಸ ಕಳೆದುಕೊಂಡು ಮುಖಭಂಗ ಅನುಭವಿಸಿದಂತಾಗಿದೆ.

             'ಪೂಜಾ ಅವರು ದುಷ್ಕೃತ್ಯದ ಮೂಲಕ ತಮಗೆ ಅನುಮತಿಸಿದ್ದ ಮಿತಿಯನ್ನು ಮೀರಿ ಹಲವು ಪ್ರಯತ್ನಗಳನ್ನು ಪಡೆದಿರುವುದು ತನಿಖೆಯಿಂದ ಗೊತ್ತಾಗಿದೆ. ಹೀಗಾಗಿ ಇವರ ನೇಮಕಾತಿಯನ್ನೇ ರದ್ದುಗೊಳಿಸುವಂತ ಗಂಭೀರ ಕ್ರಮ ಕೈಗೊಳ್ಳಲು ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗಿದೆ' ಎಂದು ಆಯೋಗ ಜುಲೈ 19ರಂದು ತಿಳಿಸಿತ್ತು.

               2023ನೇ ಸಾಲಿನ ಐಎಎಸ್ ಅಧಿಕಾರಿಯಾಗಿರುವ ಖೇಡ್ಕರ್ ಅವರನ್ನು ವಾಶೀಂ ಜಿಲ್ಲೆಗೆ ಮಹಾರಾಷ್ಟ್ರ ಸರ್ಕಾರ ವರ್ಗಾವಣೆ ಮಾಡಿತ್ತು. ಅವರು ಕೇಂದ್ರ ಲೋಕಸೇವಾ ಆಯೋಗಕ್ಕೆ ಸಲ್ಲಿಸಿದ ವೈದ್ಯಕೀಯ ಪ್ರಮಾಣ ಪತ್ರದಲ್ಲಿ ತಾವು ಭಾಗಶಃ ಅಂಗವೈಕಲ್ಯದಿಂದ ಬಳಲುತ್ತಿರುವುದಾಗಿ ಹೇಳಿದ್ದರು. ಆಕ್ಷೇಪಣೆ ಸಲ್ಲಿಸಲು ಅವಕಾಶ ಕೊಟ್ಟರೂ ಅವರು ಆಕ್ಷೇಪಣೆ ಸಲ್ಲಿಸಿಲ್ಲ ಎಂದು ಆಯೋಗ ಹೇಳಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries