HEALTH TIPS

ಸ್ವಾತಂತ್ರ್ಯೋತ್ಸವದಲ್ಲಿ ಪಾಲ್ಗೊಳ್ಳಲು ಮುಕ್ತ ಅವಕಾಶ, J&Kನಲ್ಲಿ ಬಿಗಿ ಭದ್ರತೆ

 ಶ್ರೀನಗರ: 77ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕಾಶ್ಮೀರದಾದ್ಯಂತ ಭದ್ರತೆ ಬಿಗಿ ಮಾಡಲಾಗಿದೆ. ಧ್ವಜಾರೋಹಣ ನಡೆಯುವ ಸ್ಥಳದಲ್ಲಿ ಬಹು ಹಂತದ ಭದ್ರತೆ ಕೈಗೊಳ್ಳಲಾಗಿದೆ.

ಆ.15ರಂದು ಧ್ವಜಾರೋಹಣ ನಡೆಯುವ ಬಕ್ಷಿ ಕ್ರೀಡಾಂಗಣದಲ್ಲಿ ಇಂದು ಪೂರ್ವ ತಾಲೀಮು ನಡೆದಿದ್ದು, ಕಾಶ್ಮೀರ ವಲಯದ ಪೊಲೀಸ್ ಮಹಾನಿರೀಕ್ಷಕ ವಿ.ಕೆ. ಬಿರ್ಡಿ ಅವರು ಕವಾಯತಿನಲ್ಲಿ ಗೌರವ ವಂದನೆ ಸ್ವೀಕರಿಸಿದರು.

ಪರೇಡ್‌ನಲ್ಲಿ ಭದ್ರತಾ ಸಿಬ್ಬಂದಿ, ಶಾಲಾ ಮಕ್ಕಳು, ಪೊಲೀಸ್‌ ಅಧಿಕಾರಿಗಳು ಭಾಗಿಯಾದರು.

'ಸ್ವಾತಂತ್ರ್ಯ ದಿನಾಚರಣೆ ಶಾಂತಿಯುತವಾಗಿ ನಡೆಯಲು ಅಗತ್ಯವಾದ ಭದ್ರತೆಯನ್ನು ಕೈಗೊಳ್ಳಲಾಗಿದೆ. ಧ್ವಜಾರೋಹಣ ನಡೆಯುವ ಬಕ್ಷಿ ಕ್ರೀಡಾಂಗಣದ ಸುತ್ತ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿದೆ. ಕಾರ್ಯಕ್ರಮದಲ್ಲಿ ಭಾಗಿಯಾಗಲು ಯಾವುದೆ ವಿಶೇಷ ಒಪ್ಪಿಗೆಯ ಅಗತ್ಯವಿಲ್ಲ. ಎಲ್ಲರೂ ಮುಕ್ತವಾಗಿ ಪಾಲ್ಗೊಳ್ಳಬಹುದು. ಪರೇಡ್‌ ಬಳಿಕ ಕಲಾವಿದರು, ಜಮ್ಮು ಮತ್ತು ಕಾಶ್ಮೀರದ ಶಾಲೆಗಳ ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ' ಎಂದು ಕಾಶ್ಮೀರದ ವಿಭಾಗೀಯ ಆಯುಕ್ತ ವಿ.ಕೆ ಬಿದೂರಿ ಪಿಟಿಐಗೆ ಮಾಹಿತಿ ನೀಡಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries