HEALTH TIPS

Wayanad landslide | ತಂದೆ ತೀರಿಕೊಂಡಾಗಿನ ದುಃಖದ ಅನುಭವಾಗುತ್ತಿದೆ: ರಾಹುಲ್

          ತಿರುವನಂತಪುರ: ತನ್ನ ತಂದೆ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆಯಾದಾಗ ಅನುಭವಿಸಿದ್ದ ಸಂಕಟಕ್ಕಿಂತ ಹೆಚ್ಚಿನ ದುಃಖವನ್ನು ವಯನಾಡ್‌ ಜನರು ಅನುಭವಿಸುತ್ತಿದ್ದಾರೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ, ವಯನಾಡ್ ಕ್ಷೇತ್ರದ ಮಾಜಿ ಸಂಸದ ರಾಹುಲ್ ಗಾಂಧಿ ಹೇಳಿದ್ದಾರೆ.

        'ನನ್ನ ತಂದೆ ತೀರಿಕೊಂಡಾಗ ಅನುಭವಿಸಿದ್ದ ಸಂಕಟ ಈಗ ಅನುಭವಕ್ಕೆ ಬರುತ್ತಿದೆ. ಇಲ್ಲಿಯ ಜನರು ತಮ್ಮ ತಂದೆಯನ್ನು ಮಾತ್ರ ಕಳೆದುಕೊಂಡಿಲ್ಲ, ಕುಟುಂಬದ ಹಲವು ಸದಸ್ಯರನ್ನೂ ಕಳೆದುಕೊಂಡಿದ್ದಾರೆ. ಹಾಗಾಗಿ ಅವರು ಅನುಭವಿಸುತ್ತಿರುವ ದುಃಖ, ನಾನು ಅನುಭವಿಸಿದ್ದಕ್ಕಿಂತಲೂ ತೀವ್ರವಾಗಿರುತ್ತದೆ. ಕುಟುಂಬದ ಹಲವು ಸದಸ್ಯರನ್ನು ಕಳೆದುಕೊಂಡು ದುಃಖದ ಮಡುವಿನಲ್ಲಿರುವ ಜನರನ್ನು ಮಾತನಾಡಿಸಲು ಕಷ್ಟವಾಗುತ್ತಿದೆ' ಎಂದು ಗುರುವಾರ ಭೂಕುಸಿತದ ಸ್ಥಳಗಳಿಗೆ ಭೇಟಿ ನೀಡಿದ ಬಳಿಕ ಅವರು ತಿಳಿಸಿದರು.

              ರಾಹುಲ್ ಜೊತೆಗಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, 'ನನ್ನ ಸಹೋದರ (ರಾಹುಲ್) ಅನುಭವಿಸುತ್ತಿರುವ ಅದೇ ಸಂಕಟ ನನಗೂ ಆಗುತ್ತಿದೆ' ಎಂದರು.

              2019ರಲ್ಲಿ ವಯನಾಡ್‌ ಸಂಸದರಾಗಿ ಆಯ್ಕೆಯಾಗಿದ್ದ ರಾಹುಲ್‌ ಅವರು ಈ ಬಾರಿಯ ಚುನಾವಣೆಯಲ್ಲೂ ಗೆದ್ದಿದ್ದರು. ಆದರೆ ಉತ್ತರ ಪ್ರದೇಶದ ರಾಯ್‌ಬರೇಲಿ ಕ್ಷೇತ್ರವನ್ನು ಉಳಿಸಿಕೊಳ್ಳುವುದಕ್ಕಾಗಿ, ವಯನಾಡ್‌ ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries