HEALTH TIPS

ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್‌ ಮಲ್ಪೆ ತಂಡದ ಕಾರ್ಯಾಚರಣೆ

 ಅಂಕೋಲಾ: ತಾಲೂಕಿನ ಶಿರೂರು ಗುಡ್ಡ ಕುಸಿತ ಸ್ಥಳದಲ್ಲಿ ಮೂರನೇ ಹಂತದ ಕಾರ್ಯಾಚರಣೆ ನಡೆಯುತ್ತಿರುವ ಸಂದರ್ಭದಲ್ಲಿ ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಶನಿವಾರ ಮಧ್ಯಾಹ್ನ (ಸೆ.21) ಪತ್ತೆಯಾಗಿದೆ.


ಮುಳುಗು ತಜ್ಞ ಈಶ್ವರ ಮಲ್ಪೆ ಕಾರ್ಯಾಚರಣೆ ನಡೆಸುತ್ತಿರುವ ಸಂದರ್ಭದಲ್ಲಿ ಲಾರಿ ಚಕ್ರ ಕಂಡು ಬಂದಿದೆ.


ಲಾರಿ ತಲೆ ಕೆಳಗಾದ ಸ್ಥಿತಿಯಲ್ಲಿ ನೀರಿನಲ್ಲಿ ಮುಳುಗಿದ್ದು, ಲಾರಿ ಚಕ್ರಕ್ಕೆ ಈಶ್ವರ ಮಲ್ಪೆ ಹಗ್ಗ ಕಟ್ಟಿ ಬಂದಿದ್ದಾರೆ.

ಜುಲೈ 16ರಂದು ನಡೆದಿದ್ದ ಗುಡ್ಡಕುಸಿತ ದುರಂತದಲ್ಲಿ ಕೇರಳ ಮೂಲದ ಲಾರಿ ನಾಪತ್ತೆಯಾಗಿತ್ತು. ಲಾರಿಯಲ್ಲಿದ್ದ ಚಾಲಕ ಅರ್ಜುನ ಸಹ ನಾಪತ್ತೆಯಾಗಿದ್ದರು. ಆ ವೇಳೆ ಹಲವು ತಂಡಗಳಿಂದ ಕಾರ್ಯಾಚರಣೆ ನಡೆಸಲಾಗಿತ್ತು. ಆದರೆ ತೀವ್ರ ನೀರಿನ ಸೆಳೆತದ ಕಾರಣದಿಂದ ಅಡ್ಡಿಯಾಗಿತ್ತು.

ಗುಡ್ಡ ಕುಸಿತದ ಕಾರಣದಿಂದ ಹೆದ್ದಾರಿ ಬದಲಿಯಲ್ಲಿದ್ದ ಹೋಟೆಲ್‌ ಸಮೇತ ಲಾರಿಯೂ ಗಂಗಾವಳಿ ನದಿ ಪಾಲಾಗಿತ್ತು. ಎನ್‌ಡಿಆರ್‌ಎಫ್ ತಂಡ‌ ಡ್ರೋನ್ ಮೂಲಕ ಸ್ಕ್ಯಾನಿಂಗ್ ನಡೆಸಿದ್ದು, ನದಿಯಲ್ಲಿ ಸ್ಕ್ಯಾನಿಂಗ್ ಮೂಲಕ ಲಾರಿ ಇರುವ ಸ್ಥಳ ಗುರುತು ಮಾಡಿತ್ತು. ಆದರೆ ಡೈವಿಂಗ್ ಮಾಡಿ ಲಾರಿಯನ್ನು ಪರಿಶೀಲಿಸಲು ನದಿಯ ಹರಿವು ಅಡ್ಡಿಯಾಗಿತ್ತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries