HEALTH TIPS

ಮಾನಹಾನಿ ಪ್ರಕರಣ: ಶಿವಸೇನಾ-UBT ನಾಯಕ ಸಂಜಯ್‌ ರಾವುತ್‌ಗೆ 15 ದಿನ ಜೈಲು

 ಮುಂಬೈ: ಬಿಜೆಪಿ ನಾಯಕ ಕಿರಿತ್ ಸೋಮಯ್ಯ ಅವರ ಪತ್ನಿ ಡಾ. ಮೇಧಾ ಅವರು ದಾಖಲಿಸಿದ್ದ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಸೇನಾ-ಯುಬಿಟಿ ನಾಯಕ ಸಂಜಯ್‌ ರಾವುತ್‌ ಅವರಿಗೆ ಮುಂಬೈ ನ್ಯಾಯಾಲಯ 15 ದಿನಗಳ ಜೈಲು ಶಿಕ್ಷೆ ವಿಧಿಸಿದೆ.

'ಮೀರಾ ಬಾಯಂಧರ್ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಾರ್ವಜನಿಕ ಶೌಚಾಲಯ ನಿರ್ಮಾಣ ಮತ್ತು ನಿರ್ವಹಣೆ ಕಾಮಗಾರಿಯಲ್ಲಿ ನಡೆದಿದೆ ಎನ್ನಲಾದ ₹ 100 ಕೋಟಿ ಮೊತ್ತದ ಹಗರಣದಲ್ಲಿ ನನ್ನ ಮತ್ತು ನನ್ನ ಪತಿ ಕಿರೀಟ್ ಸೋಮಯ್ಯ ಅವರ ವಿರುದ್ಧ ಸಂಜಯ್ ರಾವುತ್ ಆಧಾರರಹಿತ ಮತ್ತು ಮಾನಹಾನಿಕರ ಆರೋಪಗಳನ್ನು ಮಾಡಿದ್ದಾರೆ.

ರಾವುತ್ ಮಾಧ್ಯಮಗಳಿಗೆ ನೀಡಿರುವ ಹೇಳಿಕೆಗಳು ಮಾನಹಾನಿಕರವಾಗಿದ್ದು, ಸಾರ್ವಜನಿಕರ ದೃಷ್ಟಿಯಲ್ಲಿ ನನ್ನ ಚಾರಿತ್ರ್ಯ ಹದಗೆಡುವಂಥ ಹೇಳಿಕೆಗಳನ್ನು ನೀಡಿದ್ದಾರೆ' ಎಂದು ಆರೋಪಿಸಿ ಮೇಧಾ ಅವರು ಕಳೆದ ವರ್ಷವೇ ಮಝಗಾಂವ್‌ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದ ಮೆಟ್ಟಿಲೇರಿದ್ದರು.

ಮಾಜಿ ಮುಖ್ಯಮಂತ್ರಿ ಉದ್ಧವ್‌ ಬಣದ ನಾಯಕ ರಾವುತ್‌ ವಿರುದ್ಧ ಐಪಿಸಿ ಸೆಕ್ಷನ್‌ 499ರ ಅಡಿಯಲ್ಲಿ ಪ್ರಕರಣದ ದಾಖಲಿಸಿಕೊಳ್ಳಬೇಕು ಎಂದು ಕೋರಿದ್ದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries