HEALTH TIPS

ಪಿಂಚಣಿ ಯೋಜನೆ | ಕುಂದುಕೊರತೆ ಅರ್ಜಿಗಳನ್ನು 3 ವಾರಗಳಲ್ಲಿ ಇತ್ಯರ್ಥಪಡಿಸಿ: ಕೇಂದ್ರ

           ವದೆಹಲಿ: ಪಿಂಚಣಿ ಯೋಜನೆಗೆ ಸಂಬಂಧಿಸಿದ ಎಲ್ಲ ರೀತಿಯ ಕುಂದುಕೊರತೆಗಳನ್ನು ಮೂರು ವಾರಗಳಲ್ಲಿ ಪರಿಹರಿಸುವಂತೆ ಕೇಂದ್ರ ಸರ್ಕಾರವು ಇಲಾಖೆಗಳಿಗೆ ಸೂಚನೆ ನೀಡಿದೆ.

        ಕೇಂದ್ರ ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆ ಹಾಗೂ ಪಿಂಚಣಿ ಸಚಿವಾಲಯವು ಈ ಬಗ್ಗೆ ಕೇಂದ್ರ ಸರ್ಕಾರದ ಎಲ್ಲ ಇಲಾಖೆಗಳಿಗೆ ಸುತ್ತೋಲೆ ಹೊರಡಿಸಿದೆ.

              ಸಾರ್ವಜನಿಕರ ಕುಂದುಕೊರತೆಗಳನ್ನು ಪರಿಣಾಮಕಾರಿಯಾಗಿ ನಿವಾರಿಸಲು, ಕೇಂದ್ರೀಕೃತ ಪಿಂಚಣಿ ಕುಂದುಕೊರತೆಗಳ ಪರಿಹಾರ ಮತ್ತು ಮೇಲ್ವಿಚಾರಣಾ ವ್ಯವಸ್ಥೆ ಪೋರ್ಟಲ್‌ ಅನ್ನು ಪುನರ್‌ ರಚಿಸಲಾಗಿದೆ ಎಂದು ತಿಳಿಸಿದೆ.

             ಸಾರ್ವಜನಿಕ ಕುಂದುಕೊರತೆಗಳನ್ನು ತ್ವರಿತವಾಗಿ ಪರಿಹರಿಸಲು ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದೆ. ಈ ಪ್ರಕಾರ ಪಿಂಚಣಿಗೆ ಸಂಬಂಧಿಸಿದ ಕುಂದುಕೊರತೆ ಅರ್ಜಿಗಳನ್ನು 21 ದಿನಗಳಲ್ಲಿ ವಿಲೇವಾರಿ ಮಾಡಬೇಕು. ಒಂದೊಮ್ಮೆ ಹೆಚ್ಚಿನ ಕಾಲಾವಕಾಶ ಬೇಕಿದ್ದಲ್ಲಿ, ಮಧ್ಯಂತರ ಪರಿಹಾರವನ್ನಾದರೂ ಒದಗಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

            ಇಲಾಖೆ ಒದಗಿಸಿದ ಪರಿಹಾರದಿಂದ ಅರ್ಜಿದಾರರು ತೃಪ್ತರಾದಿದ್ದಲ್ಲಿ, ಅರ್ಜಿ ಇತ್ಯರ್ಥಗೊಂಡ 30 ದಿನಗಳ ಒಳಗಾಗಿ ಮೇಲ್ಮನವಿ ಸಲ್ಲಿಸಬೇಕು. ಮೇಲ್ಮನವಿ ಪ್ರಾಧಿಕಾರವು 30 ದಿನಗಳ ಒಳಗೆ ಅರ್ಜಿದಾರರಿಗೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ತಿಳಿಸಲಾಗಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries