HEALTH TIPS

ಶಬರಿಮಲೆ ಯಾತ್ರಾರ್ಥಿಗಳಿಗೆ ಅಗತ್ಯ ಸೌಲಭ್ಯಗಳನ್ನು ಖಚಿತಪಡಿಸಲಾಗಿದೆ: ಪತ್ತನಂತಿಟ್ಟ ಜಿಲ್ಲಾಧಿಕಾರಿ

ಪತ್ತನಂತಿಟ್ಟ: ಈ ವರ್ಷ ಶಬರಿಮಲೆ ಯಾತ್ರೆಗೆ ಆಗಮಿಸುವ ಭಕ್ತರಿಗೆ ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನು ಜಿಲ್ಲಾಡಳಿತ ಖಾತ್ರಿಪಡಿಸಲಿದೆ ಎಂದು ಜಿಲ್ಲಾಧಿಕಾರಿ ವಿ.ವಿಘ್ನೇಶ್ವರಿ ಹೇಳಿದರು.

ಪಾದಯಾತ್ರೆ ಕುರಿತಂತೆ ಜಿಲ್ಲಾಧಿಕಾರಿಗಳ ಸಮ್ಮೇಳನ ಸಭಾಂಗಣದಲ್ಲಿ ನಡೆದ ಜನಪ್ರತಿನಿಧಿಗಳು ಹಾಗೂ ಜಿಲ್ಲಾ ಮಟ್ಟದ ಇಲಾಖೆಗಳ ಮುಖ್ಯಸ್ಥರ ಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿ ಮಾತನಾಡಿದರು.

ಅಗತ್ಯವಿರುವ ಸ್ಥಳಗಳಲ್ಲಿ ಕುಡಿಯುವ ನೀರು ಮತ್ತು ಶೌಚಾಲಯ ವ್ಯವಸ್ಥೆಗಳನ್ನು ಖಚಿತಪಡಿಸಿಕೊಳ್ಳಲು ಸ್ಥಳೀಯ ಸಂಸ್ಥೆಗಳಿಗೆ ಸೂಚನೆ ನೀಡಲಾಗುವುದು. ಯಾತ್ರಾ ಮಾರ್ಗದಲ್ಲಿ ಮೋಟಾರು ವಾಹನ ಇಲಾಖೆ ಅಗತ್ಯ ಸೂಚನಾ ಫಲಕಗಳನ್ನು ಅಳವಡಿಸಲಿದೆ. ಆಹಾರ ಸುರಕ್ಷತಾ ಇಲಾಖೆಯು ಹೋಟೆಲ್‍ಗಳಲ್ಲಿ ಬೆಲೆ ಪಟ್ಟಿಯನ್ನು ಪ್ರದರ್ಶಿಸುವ ಜವಾಬ್ದಾರಿಯನ್ನು ಹೊಂದಿದೆ ಮತ್ತು ಯಾತ್ರೆಯ ಮಾರ್ಗದಲ್ಲಿ ಮತ್ತು ಉಳಿದ ನಿಲ್ದಾಣಗಳಲ್ಲಿ ಆಹಾರ ಪದಾರ್ಥಗಳ ಬೆಲೆಯನ್ನು ನಿಗದಿಪಡಿಸಿ ಕ್ರೋಢೀಕರಿಸಲಾಗುತ್ತದೆ ಮತ್ತು ಮಾಹಿತಿಯನ್ನು ತಿಳಿಸಲಾಗುತ್ತದೆ. ಪತ್ರಿಕಾ ಮತ್ತು ಹೊಸ ಮಾಧ್ಯಮಗಳ ಮೂಲಕ ಮಾಹಿತಿಗಳನ್ನು ನೀಡಲಾಗುವುದು ಎಂದಿರುವರು.

ಯಾತ್ರಾ ಮಾರ್ಗಗಳಲ್ಲಿ ರಾತ್ರಿ ಬೆಳಕಿನ ವ್ಯವಸ್ಥೆ ಕಲ್ಪಿಸುವುದು ಕೆಎಸ್‍ಇಬಿಯ ಜವಾಬ್ದಾರಿಯಾಗಿದೆ.

ರಸ್ತೆಗಳ ದುರಸ್ತಿ, ಅರಣ್ಯ ಒತ್ತುವರಿ, ಎಚ್ಚರಿಕೆ ಫಲಕಗಳ ಅಳವಡಿಕೆ ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸುವಂತೆ ಲೋಕೋಪಯೋಗಿ ಇಲಾಖೆಗೆ ಸಭೆ ಸೂಚಿಸಿತು. ಜಿಲ್ಲಾ ವೈದ್ಯಾಧಿಕಾರಿಗಳು ಮುಕ್ಕುಜಿ, ಸತ್ರಂ ಮತ್ತು ಪುಲ್ಲುಮೇಡು ಕೇಂದ್ರಗಳಲ್ಲಿ 24 ಗಂಟೆಗಳ ವೈದ್ಯಕೀಯ ಶಿಬಿರಗಳು, ವಂಡಿಪೆರಿಯಾರ್, ಕುಮಳಿ ಮತ್ತು ಪೀರುಮೇಡು ಆರೋಗ್ಯ ಕೇಂದ್ರಗಳಲ್ಲಿ ಪೂರ್ಣ ಸಮಯದ ವೈದ್ಯಾಧಿಕಾರಿ ಸೇವೆಗಳು ಮತ್ತು ಪೀರುಮೇಡು ತಾಲೂಕು ಆಸ್ಪತ್ರೆಯಲ್ಲಿ ವಿಷಾಹಾರಕ್ಕಾಗಿ 24 ಗಂಟೆಗಳ ಕಾಲ ಔಷÀಧಗಳ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲಾಗುವುದು. 

ಮಂಜುಮಾಳ ಗ್ರಾಮ ಕಚೇರಿ ಪಕ್ಕದಲ್ಲಿ 24 ಗಂಟೆ ನಿಯಂತ್ರಣ ಕೊಠಡಿ ಕಾರ್ಯನಿರ್ವಹಿಸಲಿದೆ. ಜನನಿಬಿಡ ದಿನಗಳಲ್ಲಿ ಕೆಎಸ್‍ಆರ್‍ಟಿಸಿಯ ವಿಶೇಷ ಸೇವೆಗಳು ಇರುತ್ತವೆ. ಕುಮಳಿ ಪೇಟೆಯಲ್ಲಿ ಟ್ರಾಫಿಕ್ ಜಾಮ್ ನಿಯಂತ್ರಣಕ್ಕೆ ಪೋಲೀಸರು ವಿಶೇಷ ಯೋಜನೆ ಸಿದ್ಧಪಡಿಸಲಿದ್ದಾರೆ ಎಂದು ಮಾಹಿತಿ ನೀಡಿರುವರು. 



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries