HEALTH TIPS

ಭಯೋತ್ಪಾದನೆ ವಿಚಾರವನ್ನು ದಿಕ್ಕು ತಪ್ಪಿಸುವ ಯತ್ನ: ಆರ್.ವಿ. ಬಾಬು

ಕೊಚ್ಚಿ: ಮಲಪ್ಪುರಂ ಜಿಲ್ಲೆಯ ಕರಿಪ್ಪೂರ್ ವಿಮಾನ ನಿಲ್ದಾಣದ ಮೂಲಕ ಚಿನ್ನಾಭರಣ ಕಳ್ಳಸಾಗಣೆ ಹಾಗೂ ಅಕ್ರಮ ಹಣ ವರ್ಗಾವಣೆಯನ್ನು ಕೇರಳದಲ್ಲಿ ಭಯೋತ್ಪಾದಕ ಚಟುವಟಿಕೆಗಳಿಗೆ ಬಳಸಿಕೊಳ್ಳಲಾಗುತ್ತಿದೆ ಎಂಬ ಮುಖ್ಯಮಂತ್ರಿ ಬಹಿರಂಗ ಹೇಳಿಕೆಯನ್ನು ಕೆಲವು ಸ್ಥಾಪಿತ ಹಿತಾಸಕ್ತಿಗಳು ವಿವಾದ ಸೃಷ್ಟಿಸಿ ದಿಕ್ಕು ತಪ್ಪಿಸುವ ಯೋಜನೆ ರೂಪಿಸುತ್ತಿದೆ ಎಂದು ಹಿಂದೂ ಐಕ್ಯವೇದಿ ರಾಜ್ಯಾಧ್ಯಕ್ಷ ಆರ್.ವಿ.ಬಾಬು ಆರೋಪಿಸಿದ್ದಾರೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಈ ಹಿಂದೆ ಹಲವು ಬಾರಿ ಅಂಕಿ ಅಂಶಗಳನ್ನು ಉಲ್ಲೇಖಿಸಿ ಪದೇ ಪದೇ ಬಹಿರಂಗಪಡಿಸಿದ ಮಾಹಿತಿ ಇದು. ಆದ್ದರಿಂದ ಇದನ್ನು ನಿರ್ಲಕ್ಷಿಸಲಾಗದು ಎಂದಿರುವರು. 

ಮಲಪ್ಪುರಂ ಜಿಲ್ಲೆಯಲ್ಲಿ ನಡೆಯುತ್ತಿರುವ ಕಳ್ಳಸಾಗಾಣಿಕೆಯನ್ನು ಧರ್ಮದೊಂದಿಗೆ ಜೋಡಿಸಿ ಕೋಮು ಭಾವನೆಗಳನ್ನು ಕೆರಳಿಸಲು ಯತ್ನಿಸುತ್ತಿರುವವರು ರಾಷ್ಟ್ರೀಯ ಭದ್ರತೆಗೆ ಧಕ್ಕೆ ತರುವ ಭಯೋತ್ಪಾದನೆಯನ್ನು ಮುಚ್ಚಿಹಾಕಲು ಯತ್ನಿಸುತ್ತಿದ್ದಾರೆ. ಕೋಮು ಭಾವನೆ ಮೂಡಿಸಿ ರಾಜಕೀಯ ಲಾಭ ಪಡೆಯಲು ಮಲಪ್ಪುರಂ ಜಿಲ್ಲೆಯನ್ನು ಧರ್ಮದೊಂದಿಗೆ ಜೋಡಿಸಲಾಗಿದೆ ಎಂಬ ಆರೋಪವಿದೆ. ಈ ನಿಟ್ಟಿನಲ್ಲಿ ಲೀಗ್, ವಿರೋಧ ಪಕ್ಷಗಳು ಸೇರಿದಂತೆ ಮುಸ್ಲಿಂ ಸಂಘಟನೆಗಳ ನಿಲುವು ಕೋಮುವಾದದಿಂದ ಕೂಡಿದೆ. ಪೋಲೀಸರು ಸೇರಿದಂತೆ ಎಲ್ಲ ಕೇಂದ್ರ ಮತ್ತು ರಾಜ್ಯ ತನಿಖಾ ಸಂಸ್ಥೆಗಳು ಕಳ್ಳಸಾಗಣೆ ಹಿಂದೆ ಇರುವ ಭಯೋತ್ಪಾದಕ ಚಟುವಟಿಕೆಗಳ ಮಾಸ್ಟರ್ ಮೈಂಡ್ ಗಳನ್ನು ಪತ್ತೆ ಹಚ್ಚಿ ನ್ಯಾಯ ಕೊಡಿಸುವಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಬಾಬು ಆಗ್ರಹಿಸಿರುವರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries