ಲಖನೌ: ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 'ಅಖಂಡ ಭಾರತ' ದೃಷ್ಟಿಕೋನವನ್ನು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಬಲಪಡಿಸಲಾಗುತ್ತಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
0
samarasasudhi
ಅಕ್ಟೋಬರ್ 30, 2024
ಲಖನೌ: ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 'ಅಖಂಡ ಭಾರತ' ದೃಷ್ಟಿಕೋನವನ್ನು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಬಲಪಡಿಸಲಾಗುತ್ತಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ಸರ್ದಾರ್ ಪಟೇಲ್ ಅವರ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿದ್ದ 'ಏಕತೆಗಾಗಿ ಓಟ' ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, 'ಸರ್ದಾರ್ ಪಟೇಲ್ ಅವರು ನಮಗೆ ನೀಡಿದ ಅಖಂಡ ಭಾರತದ ಗುರಿಯನ್ನು ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ಬಲಪಡಿಸಲಾಗುತ್ತಿದೆ.
ಮುಖ್ಯಮಂತ್ರಿ ನಿವಾಸದಲ್ಲಿ ಆರಂಭವಾದ ಓಟ ಕೆ.ಡಿ ಸಿಂಗ್ ಬಾಬು ಕ್ರೀಡಾಂಗಣದಲ್ಲಿ ಮುಕ್ತಾಯಗೊಂಡಿತು. ಓಟದಲ್ಲಿ ಯುವಕರು, ಮಕ್ಕಳು ಸೇರಿದಂತೆ ನೂರಾರು ಜನರು ಪಾಲ್ಗೊಂಡಿದ್ದರು.
ಉಕ್ಕಿನ ಮನುಷ್ಯ ಎಂದೇ ಖ್ಯಾತರಾದ ದೇಶದ ಮೊದಲ ಗೃಹ ಸಚಿವ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನವನ್ನು 2014ರಿಂದ 'ರಾಷ್ಟ್ರೀಯ ಏಕತಾ ದಿನ' ಎಂದು ಆಚರಿಸಲಾಗುತ್ತಿದೆ.