HEALTH TIPS

ಗುಜರಾತ್: angioplasty ಬಳಿಕ ಆಯುಷ್ಮಾನ್ ಭಾರತ್ ಫಲಾನುಭವಿಗಳ ಸಾವು;ತನಿಖೆಗೆ ಆದೇಶ

 ಹಮದಾಬಾದ್: ಆಯುಷ್ಮಾನ್ ಭಾರತ್ ಆರೋಗ್ಯ ವಿಮೆ ಯೋಜನೆಯಡಿ ನೊಂದಣಿ ಮಾಡಿಕೊಂಡಿದ್ದ ಇಬ್ಬರು ಫಲಾನುಭವಿಗಳು ಆಯಂಜಿಯೊಪ್ಲಾಸ್ಟಿ ಚಿಕಿತ್ಸೆ ಬಳಿಕ ಮೃತಪಟ್ಟಿದ್ದು, ಗುಜರಾತ್ ಸರ್ಕಾರ ತನಿಖೆಗೆ ಆದೇಶಿಸಿದೆ.

ಆಸ್ಪತ್ರೆಯು ಎಲ್ಲರನ್ನೂ ಕತ್ತಲಲ್ಲಿಟ್ಟು ಸರ್ಕಾರದ ಯೋಜನೆಯಡಿ ವೈದ್ಯಕೀಯ ಬಿಲ್‌ಗಳ ಹಣ ಪಡೆಯುವ ತರಾತುರಿಯಲ್ಲಿ ಕೆಲಸ ಮಾಡುತ್ತಿದೆ ಎಂದು ಮೃತರ ಸಂಬಂಧಿಕರು ಆರೋಪಿಸಿದ್ದಾರೆ.

ಆಯುಷ್ಮಾನ್ ಭಾರತ್-ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ (ಪಿಎಂಜೆಎವೈ) ಅಗತ್ಯವಿರುವ ಜನರಿಗೆ ವರ್ಷಕ್ಕೆ ₹5 ಲಕ್ಷದವರೆಗೆ ಉಚಿತ ಆರೋಗ್ಯ ವಿಮೆಯನ್ನು ಒದಗಿಸುತ್ತದೆ.

ನಗರದ ಬೋಡಕ್‌ದೇವ್ ಪ್ರದೇಶದ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯೊಂದರಲ್ಲಿ ಸೋಮವಾರ ನಡೆದ ಆಯಂಜಿಯೊಪ್ಲಾಸ್ಟಿ ಮತ್ತು ಸ್ಟೆಂಟ್ ಅಳವಡಿಕೆಯ ಶಸ್ತ್ರಚಿಕಿತ್ಸೆ ನಂತರ ಇಬ್ಬರು ವ್ಯಕ್ತಿಗಳು ಮೃತಪಟ್ಟಿದ್ದಾರೆ. ಮೃತರನ್ನು - ನಾಗರ್‌ಭಾಯ್ ಸೆನ್ಮಾ (59) ಮತ್ತು ಮಹೇಶ್ ಬರೋಟ್ (45) ಎಂದು ಗುರುತಿಸಲಾಗಿದೆ.

ಸಾವಿನ ಬಗ್ಗೆ ತಿಳಿದ ನಂತರ, ಅವರ ಸಂಬಂಧಿಕರು ಆಸ್ಪತ್ರೆಗೆ ಧಾವಿಸಿ ಸರ್ಕಾರದಿಂದ ನ್ಯಾಯಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು. ಆರೋಗ್ಯವಾಗಿದ್ದವರನ್ನು ಕರೆತಂದು ಹೀಗೆ ಮಾಡಿದ್ದಾರೆ ಎಂದು ದೂರಿದ್ದಾರೆ.

'ಖ್ಯಾಟಿ ಆಸ್ಪತ್ರೆಯಲ್ಲಿ ನಡೆದಿರುವ ಘಟನೆ ಅತ್ಯಂತ ಗಂಭೀರವಾದದ್ದಾಗಿದೆ. ರಾಜ್ಯದ ವಂಚನೆ ನಿಗ್ರಹ ದಳದಿಂದ ತುರ್ತು ತನಿಖೆಗೆ ಆದೇಶಿಸಿದ್ದಾನೆ. ಆಸ್ಪತ್ರೆಯಿಂದ ಯಾವುದೇ ವಂಚನೆ, ನಿರ್ಲಕ್ಷ್ಯ ನಡೆದಿರುವುದು ಕಂಡುಬಂದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು" ಎಂದು ಆರೋಗ್ಯ ಸಚಿವ ರಿಷಿಕೇಶ್ ಪಟೇಲ್ ಹೇಳಿದ್ದಾರೆ.

ಪ್ರಾಥಮಿಕ ತನಿಖೆ ಪ್ರಕಾರ, ಬೊರಿಸಾನಾದಲ್ಲಿ ಆಸ್ಪತ್ರೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಿತ್ತು. ಪರೀಕ್ಷೆ ಬಳಿಕ 17 ಮಂದಿ ಗ್ರಾಮಸ್ಥರನ್ನು ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆತಂದಿತ್ತು. ಆ ಪೈಕಿ 7 ಮಂದಿಗೆ ಆಯಂಜಿಯೊಪ್ಲಾಸ್ಟಿ ನಡೆಸಿದೆ. ಇದರಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries