ನವದೆಹಲಿ: 'ಭಾರತೀಯ ಸಿಖ್ಖರು ಯಾವಾಗಲೂ ದೇಶದ (ಭಾರತ) ಪರವಾಗಿ ನಿಲ್ಲುತ್ತಾರೆ. ಅವರು ಎಂದಿಗೂ ಖಲಿಸ್ತಾನಿಗಳನ್ನು ಬೆಂಬಲಿಸುವುದಿಲ್ಲ' ಎಂದು ಸಿಖ್ ಗ್ಲೋಬಲ್ ಫೋರಂನ ಅಧ್ಯಕ್ಷ ತರ್ವಿಂದರ್ ಸಿಂಗ್ ಮರ್ವಾಹ್ ಹೇಳಿದ್ದಾರೆ.
0
samarasasudhi
ನವೆಂಬರ್ 11, 2024
ನವದೆಹಲಿ: 'ಭಾರತೀಯ ಸಿಖ್ಖರು ಯಾವಾಗಲೂ ದೇಶದ (ಭಾರತ) ಪರವಾಗಿ ನಿಲ್ಲುತ್ತಾರೆ. ಅವರು ಎಂದಿಗೂ ಖಲಿಸ್ತಾನಿಗಳನ್ನು ಬೆಂಬಲಿಸುವುದಿಲ್ಲ' ಎಂದು ಸಿಖ್ ಗ್ಲೋಬಲ್ ಫೋರಂನ ಅಧ್ಯಕ್ಷ ತರ್ವಿಂದರ್ ಸಿಂಗ್ ಮರ್ವಾಹ್ ಹೇಳಿದ್ದಾರೆ.
ತ್ರಿವರ್ಣ ಧ್ವಜ ಮತ್ತು ನಮ್ಮ ದೇಶವನ್ನು ಗೌರವಿಸಬೇಕೆಂದು ನಾವು ಯಾವಗಲೂ ಬಯಸುತ್ತೇವೆ ಎಂದೂ ಮರ್ವಾಹ್ ಹೇಳಿದ್ದಾರೆ.
ಹಿಂದೂ ದೇವಾಲಯದ ಮೇಲಿನ ದಾಳಿ ಖಂಡಿಸಿ ಪ್ರತಿಭಟನೆ:
ಕೆನಡಾದಲ್ಲಿನ ಹಿಂದೂ ದೇವಾಲಯದ ಮೇಲಿನ ದಾಳಿಯನ್ನು ಖಂಡಿಸಿ ಹಿಂದೂ ಸಿಖ್ ಗ್ಲೋಬಲ್ ಫೋರಂನ ಸದಸ್ಯರು ದೆಹಲಿಯಲ್ಲಿ ಭಾನುವಾರ ಪ್ರತಿಭಟನೆ ನಡೆಸಿದರು. ದೆಹಲಿಯಲ್ಲಿರುವ ಕೆನಡಾದ ಹೈಕಮಿಷನ್ ಕಡೆಗೆ ಮೆರವಣಿಗೆ ನಡೆಸುತ್ತಿದ್ದಾಗ ಭದ್ರತಾ ಪಡೆಗಳು ಅವರನ್ನು ತಡೆದಿದ್ದಾರೆ.
ನವೆಂಬರ್ 3ರಂದು ಖಾಲಿಸ್ತಾನ ಧ್ವಜಗಳನ್ನು ಹಿಡಿದಿದ್ದ ಪ್ರತಿಭಟನಾಕಾರರು ಕೆನಡಾದ ಬ್ರಾಂಪ್ಟನ್ನಲ್ಲಿರುವ ಹಿಂದೂಸಭಾ ದೇವಾಲಯದ ಆವರಣದೊಳಗೆ ನುಗ್ಗಿ, ಅಲ್ಲಿನ ಜನರೊಂದಿಗೆ ಘರ್ಷಣೆ ನಡೆಸಿದ್ದರು. ಇದನ್ನು ಭಾರತದ ಹೈಕಮಿಷನ್ ಮತ್ತು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿತ್ತು.