HEALTH TIPS

ದೆಹಲಿಯಲ್ಲಿ ಸ್ಫೋಟ, ಸ್ಥಳಕ್ಕೆ ಧಾವಿಸಿದ ಎನ್‌ಎಸ್‌ಜಿ

ನವದೆಹಲಿ: ವಾಯವ್ಯ ದೆಹಲಿಯ ಸಿಹಿತಿಂಡಿ ಅಂಗಡಿಯೊಂದರ ಹೊರಗಡೆ ಇಂದು (ಗುರುವಾರ) ಸ್ಫೋಟ ಸಂಭವಿಸಿದೆ ಎಂದು ವರದಿಯಾಗಿದೆ. 

ಘಟನೆಯಲ್ಲಿ ಯಾರಿಗೂ ಗಾಯವಾಗಿಲ್ಲ ಎಂದು ಟಿ.ವಿ.ಚಾನೆಲ್‌ಗಳು ವರದಿ ಮಾಡಿವೆ.

ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಘಟನೆ ಸಂಭವಿಸಿದೆ. ಘಟನಾ ಸ್ಥಳದಿಂದ 'ಬಿಳಿ ಪುಡಿ' ಸಂಗ್ರಹಿಸಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಘಟನಾ ಸ್ಥಳಕ್ಕೆ ಧಾವಿಸಿರುವ ಎನ್‌ಎಸ್‌ಜಿ ಕಮಾಂಡೊಗಳು ತನಿಖೆ ನಡೆಸುತ್ತಿದ್ದಾರೆ. ಸ್ಥಳದಲ್ಲಿ ಹೆಚ್ಚಿನ ಭದ್ರತೆ ಒದಗಿಸಲಾಗಿದೆ.

ದೆಹಲಿ ಪೊಲೀಸ್ ಅಪರಾಧ ದಳ, ಬಾಂಬ್ ನಿಷ್ಕ್ರಿಯ ದಳ ಕೂಡ ಪರಿಶೀಲನೆ ನಡೆಸುತ್ತಿದೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಿ...

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries