HEALTH TIPS

ದೆಹಲಿ | ದೀಪಾವಳಿ ಆಚರಣೆ ವೇಳೆ ಗುಂಡಿನ ದಾಳಿ; ಇಬ್ಬರ ಸಾವು, ಬಾಲಕನ ಸ್ಥಿತಿ ಗಂಭೀರ

 ವದೆಹಲಿ: ದೆಹಲಿಯ ಶಹದಾರಾದಲ್ಲಿ ಶಸ್ತ್ರಸಜ್ಜಿತ ದುಷ್ಕರ್ಮಿಗಳು ನಡೆಸಿದ ಗುಂಡಿನ ದಾಳಿಯಲ್ಲಿ 40 ವರ್ಷದ ವ್ಯಕ್ತಿ ಮತ್ತು ಆತನ ಸೋದರಳಿಯ ಸ್ಥಳದಲ್ಲೇ ಮತೃಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಶಹದಾರಾದ ಫಾರ್ಷ್ ಬಜಾರ್ ಪ್ರದೇಶದಲ್ಲಿರುವ ತಮ್ಮ ಮನೆಯ ಎದುರು ಪಟಾಕಿ ಹಚ್ಚುತ್ತಿದ್ದ ವೇಳೆ ದುಷ್ಕರ್ಮಿಗಳು ಏಕಾಏಕಿ ದಾಳಿ ನಡೆಸಿದ್ದಾರೆ.

ಘಟನೆಯಲ್ಲಿ ಆಕಾಶ್ ಶರ್ಮಾ ಅಲಿಯಾಸ್ ಚೊಟ್ಟು (40) ಮತ್ತು ಆತನ ಸೋದರಳಿಯ ರಿಷಭ್ ಶರ್ಮಾ (16) ಸಾವನ್ನಪ್ಪಿದ್ದರೆ, ಆತನ ಮಗ 10 ವರ್ಷದ ಬಾಲಕ ಕ್ರಿಶ್ ಶರ್ಮಾ ಗುಂಡು ತಗುಲಿ ಗಂಭೀರವಾಗಿ ಗಾಯಗೊಂಡಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ದುಷ್ಕರ್ಮಿಗಳು ಮೊದಲಿಗೆ ಆಕಾಶ್ ಶರ್ಮಾ ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಇದೇ ವೇಳೆ ತಡೆಯಲು ಬಂದ ಬಾಲಕರಿಗೂ ಗುಂಡುಗಳು ತಗುಲಿವೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ.

ಮೇಲ್ನೋಟಕ್ಕೆ ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ಕೃತ್ಯ ಎಸಗಿರುವುದು ಕಂಡುಬಂದಿದೆ. ಪ್ರಕರಣ ಸಂಬಂಧ ಎಲ್ಲಾ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries