HEALTH TIPS

ಪಿ.ಪಿ.ದಿವ್ಯಾ ಜಾಮೀನು ರದ್ದುಗೊಳಿಸಬೇಕೆಂದು ಆಗ್ರಹಿಸಿ ನವೀನ್ ಬಾಬು ಕುಟುಂಬ ಹೈಕೋರ್ಟ್‍ಗೆ ಮೊರೆ..

ಪತ್ತನಂತಿಟ್ಟ: ಕಣ್ಣೂರು ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ಪಿ.ಪಿ.ದಿವ್ಯಾ ಅವರ ಜಾಮೀನು ರದ್ದುಗೊಳಿಸುವಂತೆ ಆಗ್ರಹಿಸಿ ನವೀನ್ ಬಾಬು ಕುಟುಂಬ ಹೈಕೋರ್ಟ್ ಮೆಟ್ಟಿಲೇರಿದೆ.

ಎಸ್‍ಐಟಿ ತನಿಖೆ ನಿಷ್ಪ್ಪರಿಣಾಮಕಾರಿಯಾಗಿದೆ ಎಂದು ಕುಟುಂಬದವರು ಆರೋಪಿಸಿದ್ದಾರೆ. ತಮ್ಮ ಹೇಳಿಕೆ ದಾಖಲಿಸಿಕೊಳ್ಳಲು ತನಿಖಾ ತಂಡ ಬಂದಿಲ್ಲ, ಈ ಬಗ್ಗೆ ನ್ಯಾಯಾಲಯಕ್ಕೆ ತಿಳಿಸಲಾಗಿದೆ ಎಂದು ನವೀನ್ ಬಾಬು ಪತ್ನಿ ಮಂಜುಷಾ ಹೇಳಿದ್ದಾರೆ.

ನ್ಯಾಯಾಲಯದ ಮೇಲ್ವಿಚಾರಣೆಯ ಎಸ್‍ಐಟಿ ತನಿಖೆಯನ್ನು ಕುಟುಂಬ ಒತ್ತಾಯಿಸಿದೆ. ತನಿಖೆಯ ಪ್ರಾಥಮಿಕ ಹಂತದಲ್ಲಿ ಅವರ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆ. ಆದರೆ ನಂತರ ಈ ಬಗ್ಗೆ ಯಾವುದೇ ತನಿಖೆ ನಡೆದಿಲ್ಲ. ಪಿ.ಪಿ.ದಿವ್ಯಾ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು, ತನಿಖಾ ತಂಡ ಪ್ರಶಾಂತನ್ ಪೆಟ್ರೋಲ್ ಪಂಪ್ ವಹಿವಾಟಿನತ್ತ ಹೋಗಿಲ್ಲ ಎಂದು ಉಲ್ಲೇಖಿಸಿರುವ ಬಗ್ಗೆ ಇಂದು ಸುಳ್ಳೆಂದು ಕುಟುಂಬದವರು ಆರೋಪಿಸಿದ್ದಾರೆ.

ನವೀನ್ ಬಾಬು ಸಾವಿನಲ್ಲಿ ಭಾರೀ ಷಡ್ಯಂತ್ರವಿದೆ. ಆದರೆ ಪೋಲೀಸರು ಆರೋಪಿಗಳನ್ನು ಬಂಧಿಸಲು ಆಸಕ್ತಿ ತೋರುತ್ತಿಲ್ಲ. ಸಮರ್ಥ ತನಿಖೆಗೆ ಆಗ್ರಹಿಸಿ ಹೈಕೋರ್ಟ್ ಮೊರೆ ಹೋಗುವುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ.

ಮಹಿಳೆ ಎಂಬ ಕಾರಣಕ್ಕೆ ಪಿಪಿ ದಿವ್ಯಾಗೆ ತಲಶ್ಶೇರಿ ಪ್ರಧಾನ ಸೆಷನ್ಸ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು. ಕಣ್ಣೂರು ಬಿಟ್ಟು ಹೋಗಬಾರದು, ಸಾಕ್ಷಿಗಳ ಮೇಲೆ ಪ್ರಭಾವ ಬೀರಬಾರದು ಎಂಬ ಷರತ್ತುಗಳೊಂದಿಗೆ ಜಾಮೀನು ನೀಡಲಾಗಿದೆ.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries