HEALTH TIPS

ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಭಾರತದ ಶ್ರೀಮಂತ ಸಂಸ್ಕøತಿಯನ್ನು ಯುವಕರು ಕಲಿಯಬೇಕು: ರಾಜ್ಯಪಾಲರು

ತಿರುವನಂತಪುರ: ಭಾರತದ ಸಾಂಸ್ಕೃತಿಕ ಪರಂಪರೆ ಮತ್ತು ಇತಿಹಾಸವು ಶ್ರೀಮಂತ ಮತ್ತು ವೈವಿಧ್ಯಮಯವಾಗಿದ್ದು, ಅದನ್ನು ಅರ್ಥಮಾಡಿಕೊಳ್ಳಲು ಕಾಶ್ಮೀರದಿಂದ ಕನ್ಯಾಕುಮಾರಿವರೆಗಿನ ಸಂಸ್ಕೃತಿಗಳನ್ನು ಅರ್ಥಮಾಡಿಕೊಳ್ಳಬೇಕು ಎಂದು ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಹೇಳಿದ್ದಾರೆ.

ಕೇಂದ್ರ ಯುವ ವ್ಯವಹಾರಗಳು, ಕ್ರೀಡಾ ಸಚಿವಾಲಯ, ಗೃಹ ಸಚಿವಾಲಯ ಮತ್ತು ನೆಹರು ಯುವ ಕೇಂದ್ರದ ಜಂಟಿ ಆಶ್ರಯದಲ್ಲಿ ಆಯೋಜಿಸಲಾದ 4 ನೇ ಕಾಶ್ಮೀರ ಯುವ ವಿನಿಮಯ ಕಾರ್ಯಕ್ರಮವನ್ನು ಉದ್ಘಾಟಿಸಿ ರಾಜ್ಯಪಾಲರು ಮಾತನಾಡಿದರು. 

ಇಂತಹ ಕಾರ್ಯಕ್ರಮಗಳು ಯುವ ಪೀಳಿಗೆಗೆ ವಿಭಿನ್ನ ಸಂಸ್ಕೃತಿಗಳನ್ನು ಅರ್ಥಮಾಡಿಕೊಳ್ಳಲು ಅವಕಾಶವನ್ನು ಒದಗಿಸುತ್ತದೆ. ಶಾಂತಿ, ಅಭಿವೃದ್ಧಿ ಮತ್ತು ಪ್ರಗತಿಯ ಕುರಿತು ಸಂವಾದದಲ್ಲಿ ಕಾಶ್ಮೀರದ ಯುವ ಧ್ವನಿಗಳು ಅತ್ಯಗತ್ಯ.

1972 ರಲ್ಲಿ ಕೇಂದ್ರ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯದ ಅಡಿಯಲ್ಲಿ ಸ್ವಾಯತ್ತ ಸಂಸ್ಥೆಯಾಗಿ ಸ್ಥಾಪಿತವಾದ ನೆಹರು ಯುವ ಕೇಂದ್ರವು ಇಂದು ಅತಿದೊಡ್ಡ ತಳಮಟ್ಟದ ಯುವ ಸಂಘಟನೆಯಾಗಿ ಬೆಳೆದಿದೆ. ನಮ್ಮ ಗ್ರಾಮೀಣ ಯುವಕರ ವ್ಯಕ್ತಿತ್ವವನ್ನು ಉತ್ಕೃಷ್ಟಗೊಳಿಸಲು ಕ್ರಮಗಳನ್ನು ತೆಗೆದುಕೊಳ್ಳುವಲ್ಲಿ ಉತ್ತಮ ಕೆಲಸ ಮಾಡಲಾಗುತ್ತಿದೆ. ಅಭಿವೃದ್ಧಿ ಹೊಂದಿದ ಭಾರತದ ಸಾಕಾರಕ್ಕೆ ಯುವ ಪೀಳಿಗೆ ಕೊಡುಗೆ ನೀಡುವುದನ್ನು ಪ್ರತಿಕೂಲ ವ್ಯವಸ್ಥೆಗಳು ತಡೆಯಬಾರದು ಎಂದು ರಾಜ್ಯಪಾಲರು ಅಭಿಪ್ರಾಯಪಟ್ಟರು.

ಸೆಂಟ್ರಲ್ ಬ್ಯೂರೋ ಆಫ್ ಕಮ್ಯುನಿಕೇಷನ್ - ಕೇರಳ ಪ್ರಾದೇಶಿಕ ನಿರ್ದೇಶಕ ವಿ. ಪಾರ್ವತಿ, ಜಮ್ಮು ಮತ್ತು ಕಾಶ್ಮೀರ ಯುವ ವಿವಿ ಸಹಾಯಕ ಪ್ರಾಧ್ಯಾಪಕ ಮುನೀರ್ ಹುಸೇನ್ ಆಜಾದ್, ನೆಹರು ಯುವ ಕೇಂದ್ರ ಕೇರಳ ರಾಜ್ಯ ಸಂಚಾಲಕ ಎಂ. ಅನಿಲ್ ಕುಮಾರ್ ಹಾಗೂ ಜಿಲ್ಲಾ ಯುವ ಅಧಿಕಾರಿ ಸಂದೀಪ್ ಕೃಷ್ಣನ್ ಮಾತನಾಡಿದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries