HEALTH TIPS

Maharashtra:ಸಂಭ್ರಮಾಚರಣೆ ವೇಳೆ ಬೆಂಕಿ ಅವಘಡ; ಗೆದ್ದ ಸ್ವತಂತ್ರ ಅಭ್ಯರ್ಥಿಗೆ ಗಾಯ

ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿ ಶಿವಾಜಿ ಪಾಟೀಲ್‌ ಅವರು ಗೆಲುವು ಸಾಧಿಸಿದ್ದಕ್ಕೆ ಸಂಭ್ರಮಾಚರಣೆ ಮಾಡುವ ವೇಳೆ ಬೆಂಕಿ ಹೊತ್ತಿಕೊಂಡಿದ್ದು ಶಿವಾಜಿ ಗಾಯಗೊಂಡಿದ್ದಾರೆ.

ಶನಿವಾರ ರಾತ್ರಿ ರಸ್ತೆಯಲ್ಲಿ ಮಹಿಳೆಯೊಬ್ಬರು ಶಿವಾಜಿ ಅವರಿಗೆ ಆರತಿ ಬೆಳಗುತ್ತಿದ್ದ ವೆಳೆ ಕ್ರೇನ್‌ನಿಂದ ಗುಲಾಲ್‌ ಸುರಿಯಲಾಗಿದೆ.

ಇದು ಆರತಿ ಮೇಲೆ ಬಿದ್ದು ಬೆಂಕಿ ಹೊತ್ತಿಕೊಂಡಿದೆ.

ಘಟನೆಯಲ್ಲಿ ಶಿವಾಜಿ ಅವರೊಂದಿಗೆ ಕೆಲವು ಮಹಿಳೆಯರೂ ಗಾಯಗೊಂಡಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿರುವುದಾಗಿ ಪಿಟಿಐ ವರದಿ ಮಾಡಿದೆ.

ಬೆಂಕಿ ಹೊತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿವೆ.

ಶಿವಾಜಿ ಪಾಟೀಲ್ ಅವರು ಪಶ್ಚಿಮ ಮಹಾರಾಷ್ಟ್ರದ ಚಾಂದ್‌ಗಾದ್‌ ಕ್ಷೇತ್ರದಲ್ಲಿ ಎನ್‌ಸಿಪಿಯ ರಾಜೇಶ್‌ ಪಾಟೀಲ್‌ ಅವರನ್ನು ಸೋಲಿಸಿ, 24,134 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries