HEALTH TIPS

ಮರಾಠ ಮೀಸಲಾತಿ: ಜನವರಿ 25ರಿಂದ ಜಾರಂಗೆಯಿಂದ ಮತ್ತೆ ಅನಿರ್ದಿಷ್ಟಾವಧಿ ಉಪವಾಸ

 ಜಲ್ನಾ: ಮರಾಠರ ಬೇಡಿಕೆಗಳನ್ನು ಈಡೇರಿಸಬೇಕೆಂದು ಕೋರಿ ಮೀಸಲಾತಿ ಹೋರಾಟಗಾರ ಮನೋಜ್‌ ಜಾರಂಗೆ ಮತ್ತೆ ಅನಿರ್ದಿಷ್ಟಾವಧಿ ಉಪವಾಸ ಮಾಡುವುದಾಗಿ ಹೇಳಿದ್ದು ದಿನಾಂಕವನ್ನು ಘೋಷಿಸಿದ್ದಾರೆ.

ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ಅಂತರವಾಲಿ ಸಾರತಿ ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮರಾಠ ಸಮುದಾಯದವರು ಇದರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಬೇಕು ಎಂದರು.


ಯಾರೂ ಮನೆಯಲ್ಲಿ ಉಳಿಯಬಾರದು. ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹಕ್ಕೆ ಬನ್ನಿ, ನಮ್ಮ ಒಕ್ಕೂಟದ ಶಕ್ತಿಯನ್ನು ತೋರಿಸೋಣ ಎಂದು ಹೇಳಿದರು.

ಮುಂಬರುವ ಜನವರಿ 25ರಿಂದ ಅನಿರ್ದಿಷ್ಟಾವಧಿ ಉಪವಾಸ ಆರಂಭಿಸಲಾಗುವುದು ಎಂದು ಜಾರಂಗೆ ಹೇಳಿದರು.

ಸರ್ಕಾರ ತನ್ನ ಭರವಸೆಗಳನ್ನು ಈಡೇರಿಸಲು ವಿಫಲವಾಗಿದೆ ಎಂದು ಆರೋಪಿಸಿದ ಅವರು, ಸರ್ಕಾರ ನಮಗೆ ಮೋಸ ಮಾಡಿದೆ. ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ನಾವು ಅವರನ್ನು ಬಿಡುವುದಿಲ್ಲ ಎಂದು ಹೇಳಿದರು.

ಕಳೆದ ಒಂದು ವರ್ಷದಲ್ಲಿ ಆರು ಉಪವಾಸ ಸತ್ಯಾಗ್ರಹಗಳನ್ನು ನಡೆಸಲಾಗಿದೆ. ಇದು ಸ್ವಯಂಪ್ರೇರಿತವಾಗಿದ್ದು ಮರಾಠಾ ಸಮುದಾಯದ ಯಾವುದೇ ಸದಸ್ಯರು ಭಾಗವಹಿಸಬಹುದು ಎಂದು ಒತ್ತಿಹೇಳಿದರು. ಯಾರು ಬೇಕಾದರೂ ಸೇರಬಹುದು. ಯಾರ ಮೇಲೂ ಬಲವಂತ ಅಥವಾ ಒತ್ತಡವಿಲ್ಲ ಎಂದು ಜಾರಂಗೆ ಸ್ಪಷ್ಟಪಡಿಸಿದರು.

ಇದೇ ವರ್ಷ ಫೆಬ್ರುವರಿಯಲ್ಲಿ ಶಿಕ್ಷಣ, ಸರ್ಕಾರಿ ಉದ್ಯೋಗಗಳಲ್ಲಿ ಮರಾಠಾಗಳಿಗೆ ಪ್ರತ್ಯೇಕ ವರ್ಗದ ಅಡಿಯಲ್ಲಿ ಶೇ. 10ರಷ್ಟು ಮೀಸಲಾತಿ ಒದಗಿಸುವ ಮಸೂದೆಯನ್ನು ಮಹಾರಾಷ್ಟ್ರ ಸರ್ಕಾರ ಅಂಗೀಕರಿಸಿದೆ. ಆದರೆ ಜರಾಂಗೆ ಅವರು ಮರಠಾ ಸಮುದಾಯಕ್ಕೆ ಓಬಿಸಿ ಅಡಿಯಲ್ಲಿ ಮೀಸಲಾತಿ ನೀಡುವಂತೆ ಒತ್ತಾಯಿಸುತ್ತಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries