HEALTH TIPS

ಜಮ್ಮು: ಒಳನುಸುಳುವಿಕೆ ತಡೆಯಲು ಇನ್ನೂ ಎರಡು ತುಕಡಿ ನಿಯೋಜನೆ

 ನವದೆಹಲಿ: ಪಾಕಿಸ್ತಾನದ ಕಡೆಯಿಂದ ಉಗ್ರರ ಒಳನುಸುಳುವಿಕೆ ಮತ್ತು ಭಯೋತ್ಪಾದಕ ಚಟುವಟಿಕೆಗಳನ್ನು ತಡೆಯಲು ಗಡಿ ಭದ್ರತಾ ಪಡೆಯು (ಬಿಎಸ್‌ಎಫ್‌) ಇನ್ನೂ ಎರಡು ತುಕಡಿಗಳನ್ನು ಜಮ್ಮು ಪ್ರದೇಶದಲ್ಲಿ ನಿಯೋಜಿಸಲಾಗಿದೆ.

ಈಚೆಗೆ ಭಯೋತ್ಪಾದಕ ಚಟುವಟಿಕೆಗಳು ಹೆಚ್ಚುತ್ತಿರುವ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ.


‌ಈ ಹಿಂದೆ ಒಡಿಶಾದಲ್ಲಿ ನಕ್ಸಲ್ ನಿಗ್ರಹ ಕಾರ್ಯಾಚರಣೆ ನಡೆಸುತ್ತಿದ್ದ ಎರಡು ತುಕಡಿಗಳನ್ನು ಜುಲೈ ಮತ್ತು ಆಗಸ್ಟ್‌ನಲ್ಲಿ ವಾಪಸ್ ಕರೆಸಿಕೊಳ್ಳಲಾಗಿತ್ತು. ಈಗ ಅವನ್ನು ಜಮ್ಮುಗೆ ಕಳುಹಿಸಲಾಗಿದೆ.

ಪಾಕಿಸ್ತಾನದ ಕಡೆಯಿಂದ ಭಾರತಕ್ಕೆ ಒಳನುಸುಳುವವರನ್ನು ತಡೆಯುವುದು ಸವಾಲಿನ ಕೆಲಸವಾಗಿದ್ದು, ಚಳಿಗಾಲಕ್ಕೂ ಮುನ್ನ ಗಡಿಯನ್ನು ಭದ್ರಪಡಿಸುವ ಉದ್ದೇಶದಿಂದ ಸೇನೆಯು ಈ ನಿರ್ಧಾರ ಕೈಗೊಂಡಿದೆ ಎಂದು ಮೂಲಗಳು ತಿಳಿಸಿವೆ.

ಸಾಂಬಾ, ಜಮ್ಮು ಮತ್ತು ಪಂಜಾಬ್ ಗಡಿ ಪ್ರದೇಶಗಳಲ್ಲಿ ನೂತನ ತುಕಡಿಯ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಅವರಿಗೆ ಅಗತ್ಯ ವ್ಯವಸ್ಥೆಗಳನ್ನು ಮಾಡುತ್ತಿದ್ದು, ತಾತ್ಕಾಲಿಕ ಮತ್ತು ಶಾಶ್ವತ ನೆಲೆ, ಗಸ್ತು ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ಹೇಳಿವೆ.

ಜಮ್ಮುವಿನಲ್ಲಿ ಈ ವರ್ಷ ನಡೆದ ಸರಣಿ ಭಯೋತ್ಪಾದಕ ದಾಳಿಗಳಲ್ಲಿ 40ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಸೇನೆಯು ಹಲವು ಉಗ್ರರನ್ನು ಹತ್ಯೆಗೈದಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries