HEALTH TIPS

ಅಮಿತ್ ಶಾ ಹೇಳಿಕೆ ವಿರುದ್ಧ ಪ್ರತಿಭಟನೆ: ಸಚಿವರ ಕ್ಷಮೆಗೆ ಬಿಎಸ್‌ಪಿ ಆಗ್ರಹ

ಲಖನೌ: ಡಾ. ಬಿ.ಆರ್‌.ಅಂಬೇಡ್ಕರ್‌ ಅವರ ಕುರಿತು ಗೃಹ ಸಚಿವ ಅಮಿತ್‌ ಶಾ ನೀಡಿರುವ ಹೇಳಿಕೆಯನ್ನು ಖಂಡಿಸಿ ಪಕ್ಷವು ದೇಶದಾದ್ಯಂತ ಪ್ರತಿಭಟನೆ ನಡೆಸಲಿದೆ ಎಂದು ಬಿಆರ್‌ಎಸ್‌ ಮುಖ್ಯಸ್ಥೆ ಮಾಯಾವತಿ ಅವರು ಶನಿವಾರ ಹೇಳಿದ್ದಾರೆ.ಅಮಿತ್‌ ಶಾ ಕ್ಷಮೆಯಾಚಿಸಬೇಕೆಂದು ಪಕ್ಷವು ಆಗ್ರಹಿಸಿದೆ.

'ದಲಿತ ಸಮುದಾಯ ಮತ್ತು ಇತರ ಹಿಂದುಳಿದ ಸಮುದಾಯಗಳು ಅಂಬೇಡ್ಕರ್‌ ಅವರನ್ನು ದೇವರಂತೆ ಪೂಜಿಸುತ್ತಾರೆ. ಅವರಿಗೆ ಅಮಿತ್ ಶಾ ಅಗೌರವ ತೋರಿರುವುದು ಜನರಿಗೆ ನೋವುಂಟು ಮಾಡಿದೆ. ಜನರು ಕೋಪಗೊಂಡಿದ್ದಾರೆ. ಯಾವುದೇ ರಾಜಕೀಯ ಪಕ್ಷಗಳು ಅಂಬೇಡ್ಕರ್‌ ಅವರಿಗೆ ಅಗೌರವ ತೋರಬಾರದು. ಅವರಿಗೆ ಅಗೌರವ ತೋರಿದ ಪಕ್ಷಗಳಿಗೆ ನಾವೂ ಗೌರವ ನೀಡುವುದಿಲ್ಲ' ಎಂದು ಹೇಳಿದ್ದಾರೆ.

ಅಂಬೇಡ್ಕರ್‌ ಅವರ ಬಗ್ಗೆ ಅಮಿತ್‌ ಶಾ ಅವರು ರಾಜ್ಯಸಭೆಯಲ್ಲಿ ನೀಡಿರುವ ಹೇಳಿಕೆ ಬಗ್ಗೆ ವಿರೋಧಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries