HEALTH TIPS

ಇಂದು ಮುಂಡಪ್ಪಳ್ಳ ಶ್ರೀ ರಾಜರಾಜೇಶ್ವರೀ ಕ್ಷೇತ್ರದಲ್ಲಿ ಭೂದೇವಿ ಶ್ರೀದೇವಿ ಸಹಿತ ಶ್ರೀನಿವಾಸ ಕಲ್ಯಾಣೋತ್ಸವ

ಕುಂಬಳೆ: ಮುಂಡಪಳ್ಳದ ಶ್ರೀ ರಾಜರಾಜೇಶ್ವರಿ ಕ್ಷೇತ್ರದಲ್ಲಿ ಇದೇ ಮೊದಲ ಬಾರಿಗೆ ಕಲಿಯುಗದ ಆರಾಧ್ಯಮೂರ್ತಿ ಶ್ರೀವೆಂಕಟೇಶ್ವರ ಸ್ವಾಮಿಯ ಭೂದೇವಿ ಶ್ರೀದೇವಿ ಸಹಿತ ಶ್ರೀನಿವಾಸ ಕಲ್ಯಾಣೋತ್ಸವ ಡಿ. 25ರಂದು ನಡೆಯಲಿದೆ,   

ಬೆಂಗಳೂರಿನ ಶ್ರೀ ರಾಮಾನುಜ ಮಠದ ವೇದಮೂರ್ತಿ ಮೋಹನ ಕೃಷ್ಣ ಆಚಾರ್ಯ ಮತ್ತು ಸಹ ಆಚಾರ್ಯರ ನೇತೃತ್ವದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ನಡೆಯಲಿದೆ.   ಬೆಳಗ್ಗೆ 7.30ರಿಂದ ಫಲಪಂಚಾಮೃತ ಅಭಿಷೇಕ, ನಿತ್ಯ ವಿಧಿ, ತಿರುಮಂಜನ ಸೇವೆ, 8.30ರಿಂದ ಕೋಮಲ ಸೇವೆ, ಪೀತಾಂಬರ ಸಮರ್ಪಣೆ 10.30ಕ್ಕೆ ತಿರುಪಾವಡಿ ಸೇವೆ, ಆರತಿ ತೀರ್ಥ, ಪ್ರಸಾದ ವಿತರಣೆ ಸಂಜೆ 4ಕ್ಕೆ ಗರುಡೋತ್ಸವ, ಶ್ರೀನಿವಾಸ ಕಲ್ಯಾಣೋತ್ಸವ ಮತ್ತು 7.30 ರಿಂದ ಮಹಾ ಮಂಗಳಾರತಿ, ತೀರ್ಥ ಪ್ರಸಾದ ವಿತರಣೆ ಹಾಗೂ ಮಹಾ ಅನ್ನಪ್ರಸಾದ ವಿತರಣೆ ನಡೆಯಲಿದೆ. 

ಈ ಸಂದರ್ಭ ನಾಡಿನಾದ್ಯಂತ ಧಾರ್ಮಿಕ ಸಾಮಾಜಿಕ ಶೈಕ್ಷಣಿಕ ಕ್ಷೇತ್ರಗಳಲ್ಲಿ ನಡೆಯುವ ಸತ್ಕಾರ್ಯಗಳಿಗೆ ಮಹಾನ್ ಕೊಡುಗೆ ನೀಡುತ್ತಿರುವ ಕರ್ನಾಟಕ ರಾಜ್ಯ ಸುವರ್ಣ ಮಹೋತ್ಸವ ಪ್ರಶಸ್ತಿ ಪುರಸ್ಕøತರು, ಉದ್ಯಮಿ  ಸದಾಶಿವ ಶೆಟ್ಟಿ ಕುಳೂರುಕನ್ಯಾನ ಇವರನ್ನು ಸನ್ಮಾನಿಸಲಾಗುವುದು. ಡಾ. ಸತ್ಯಪ್ರಕಾಶ್ ಶೆಟ್ಟಿ ಮುಂಬೈ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಕಾರ್ಯಕ್ರಮದ ಸಂಘಟಕ ಮುಂಡಪಳ್ಳ ಶ್ರೀ ರಾಜರಾಜೇಶ್ವರಿ ಕ್ಷೇತ್ರದ ಆಡಳಿತ ಮುಕ್ತೇಸರ ಕೆ.ಕೆ ಶೆಟ್ಟಿ ಅವರು ಉಪಸ್ಥಿತರಿರುವರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries