ಕಾಸರಗೋಡು: ಕಾಸರಗೋಡಿನಲ್ಲಿ ಕನ್ನಡದ ಅವಗಣನೆ ಮತ್ತು ಅನ್ಯ ಭಾಷಾ ಪ್ರಭಾವ ಹೆಚ್ಚುತ್ತಿರುವ ಈ ಸಂದರ್ಭದಲ್ಲಿ ಕನ್ನಡ ಮಾಧ್ಯಮ ಅಧ್ಯಾಪಕರು ಗಡಿನಾಡು ಕಾಸರಗೋಡಿನಲ್ಲಿ ಕನ್ನಡವನ್ನು ಉಳಿಸಿ-ಬೆಳೆಸಲು ಕಟಿಬದ್ಧರಾಗಬೇಕು. ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ವಿದ್ಯಾರ್ಥಿಗಳಲ್ಲಿ ಮತ್ತು ಶಿಕ್ಷಕರಲ್ಲಿ ಕನ್ನಡದ ಬಗ್ಗೆ ಒಲವು ಮೂಡಿಸಬೇಕು ಎಂದು ನಿವೃತ್ತ ಉಪಜಿಲ್ಲಾ ಶಿಕ್ಷಣಾಧಿಕಾರಿ ಕೆ.ಪುಂಡರೀಕಾಕ್ಷ ಆಚಾರ್ಯ ಹೇಳಿದರು.
ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ಕಾಸರಗೋಡು, ಬೇಕಲ-ಹೊಸದುರ್ಗ ಉಪಜಿಲ್ಲಾ ಸಮ್ಮೇಳನವನ್ನು ಬೀರಂತಬೈಲಿನ ಕನ್ನಡ ಅಧ್ಯಾಪಕ ಭವನದಲ್ಲಿ ಇತ್ತೀಚೆಗೆ ಉದ್ಘಾಟಿಸಿ ಅವರು ಮಾತನಾಡಿದರು.
ಕಾಸರಗೋಡು ಉಪಜಿಲ್ಲಾ ಘಟಕದ ಅಧ್ಯಕ್ಷೆ ಯಶೋದ ಟೀಚರ್ ಅಧ್ಯಕ್ಷತೆ ವಹಿಸಿದ್ದರು. ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ಕೇಂದ್ರ ಸಮಿತಿ ಅಧ್ಯಕ್ಷ ಶ್ರೀನಿವಾಸ ರಾವ್ ಪಿ.ಬಿ, ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ಸಂಘಟನಾ ಕಾರ್ಯದರ್ಶಿ ವಿಶಾಲಾಕ್ಷ ಪುತ್ರಕಳ, ನಿವೃತ್ತ ಮುಖ್ಯೋಪಾಧ್ಯಾಯ ಶ್ಯಾಮ್ ಭಟ್, ಕಾಸರಗೋಡು ಉಪಜಿಲ್ಲಾ ವಿದ್ಯಾಧಿಕಾರಿ ಆಗಸ್ಟಿನ್ ಬರ್ನಾಡ್ ಮುಖ್ಯ ಅತಿಥಿಗಳಾಗಿದ್ದರು. ಕೇಂದ್ರ ಸಮಿತಿ ಕೋಶಾಧಿಕಾರಿ ಶರತ್ ಕುಮಾರ್, ಕಾಸರಗೋಡು ಉಪಜಿಲ್ಲಾ ಕಾರ್ಯದರ್ಶಿ ವಿನೋದ್ ರಾಜ್, ಕೋಶಾಧಿಕಾರಿ ಕುಶ ಉಪಸ್ಥಿತರಿದ್ದರು. ಬೇಕಲ-ಹೊಸದುರ್ಗ ಉಪಜಿಲ್ಲಾ ಅಧ್ಯಕ್ಷೆ ರಜನೀ ಕುಮಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು.
2023- 24 ನೇ ವರ್ಷದಲ್ಲಿ ಎಲ್ ಎಸ್ ಎಸ್, ಯು ಎಸ್ ಎಸ್ ವಿಜೇತರಾದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳನ್ನು ಹಾಗೂ ಉಪಜಿಲ್ಲಾ ಕಲೋತ್ಸವದ ಎಲ್.ಪಿ. ವಿಭಾಗದ ಕನ್ನಡ ಅಭಿನಯ ಗೀತೆ ಮತ್ತು ಕಥೆ ಹೇಳುವ ಸ್ಪರ್ಧೆಗಳಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳನ್ನು ಈ ಸಂದರ್ಭದಲ್ಲಿ ಅಭಿನಂದಿಸಲಾಯಿತು. ಬಳಿಕ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು ಜರಗಿತು.
ಕಾಸರಗೋಡು ಉಪಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯೆ ಪೂರ್ಣಿಮಾ ಸ್ವಾಗತಿಸಿ, ಬೇಕಲ- ಹೊಸದುರ್ಗ ಉಪಜಿಲ್ಲಾ ಕಾರ್ಯದರ್ಶಿ ಧನ್ಯಶ್ರೀ ವಂದಿಸಿದರು. ಕೇಂದ್ರ ಸಮಿತಿ ಜೊತೆ ಕಾರ್ಯದರ್ಶಿ ಬಾಬು ಮಾಸ್ತರ್ ಕಾರ್ಯಕ್ರಮ ನಿರೂಪಿಸಿದರು. ಬಳಿಕ ನಡೆದ ಪ್ರತಿನಿಧಿ ಸಮ್ಮೇಳನದಲ್ಲಿ ನೂತನ ಸಮಿತಿಯನ್ನು ರೂಪೀಕರಿಸಲಾಯಿತು. ಕಾಸರಗೋಡು ಉಪಜಿಲ್ಲಾ ಘಟಕದ ಅಧ್ಯಕ್ಷರಾಗಿ ಯಶೋದ ಟೀಚರ್, ಕಾರ್ಯದರ್ಶಿಯಾಗಿ ಪೂರ್ಣಿಮಾ, ಕೋಶಾಧಿಕಾರಿಯಾಗಿ ಕುಶ ಹಾಗೂ ಬೇಕಲ-ಹೊಸದುರ್ಗ ಉಪಜಿಲ್ಲಾ ಅಧ್ಯಕ್ಷರಾಗಿ ರಜನೀಕುಮಾರಿ, ಕಾರ್ಯದರ್ಶಿಯಾಗಿ ಧನ್ಯಶ್ರೀ, ಕೋಶಾಧಿಕಾರಿಯಾಗಿ ಸುಬ್ರಹ್ಮಣ್ಯ ಪ್ರಸಾದ್ ಆಯ್ಕೆಯಾದರು.




.jpg)
.jpg)
.jpg)

