HEALTH TIPS

ಸಿಂಗ್ ಅಂತ್ಯಸಂಸ್ಕಾರದ ಹೊತ್ತಲ್ಲಿ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾದ ಕೇರಳ ಸಿಎಂ

 ಕೊಚ್ಚಿ: ಇಡೀ ರಾಷ್ಟ್ರವೇ ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ನಿಧನದ ದುಃಖದಲ್ಲಿರುವಾಗ ಮುಖ್ಯಮಂತ್ರಿ ಪಿಣರಾಜಿ ವಿಜಯನ್‌ ಅವರು ಇಲ್ಲಿನ ವಿಮಾನ ನಿಲ್ದಾಣದಲ್ಲಿ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡಿದ್ದಾರೆ ಎಂದು ಕಾಂಗ್ರೆಸ್‌ ಶನಿವಾರ ಟೀಕಿಸಿದೆ.

ಈ ಸಂಬಂಧ ಮಾಧ್ಯಮದವರೊಂದಿಗೆ ಮಾತನಾಡಿರುವ ವಿಧಾನಸಭೆ ವಿರೋಧ ಪಕ್ಷದ ವಿ.ಡಿ. ಸತೀಶನ್‌, ಮುಖ್ಯಮಂತ್ರಿಯವರು 'ಅಗೌರವ' ಹಾಗೂ 'ಅನುಚಿತ' ವರ್ತನೆ ತೋರಿದ್ದಾರೆ ಎಂದು ಕಿಡಿಕಾರಿದ್ದಾರೆ.

'ಹತ್ತು ವರ್ಷ ದೇಶದ ಪ್ರಧಾನಿಯಾಗಿದ್ದ ಮನಮೋಹನ್‌ ಸಿಂಗ್‌ ಅವರ ಅಂತ್ಯಕ್ರಿಯೆ ದೆಹಲಿಯಲ್ಲಿ ನಡೆಯುತ್ತಿರುವಾಗ, ಮುಖ್ಯಮಂತ್ರಿಯವರು ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದು ಅಗೌರವ ಹಾಗೂ ಅನುಚಿತ ನಡೆ' ಎಂದು ಸತೀಶನ್‌ ಟೀಕಿಸಿದ್ದಾರೆ.

'ಮುಖ್ಯಮಂತ್ರಿಯವರು ಕಾರ್ಯಕ್ರಮದಲ್ಲಿ ಭಾಗವಹಿಸಬಾರದಿತ್ತು. ಕಾರ್ಯಕ್ರಮವನ್ನು ಮುಂದೂಡುವಂತೆ ಹಾಗೂ ಸಿಎಂಗೆ ಮಾಹಿತಿ ನೀಡುವಂತೆ ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ಮನವಿ ಮಾಡಿದ್ದೆವು' ಎಂದೂ ಹೇಳಿದ್ದಾರೆ.

ಮುಖ್ಯಮಂತ್ರಿ ಅವರು ತೋರಿದ ಅಗೌರವದ ಬಗ್ಗೆ ನೋವು ತೋಡಿಕೊಂಡ ಸತೀಶನ್‌, ಆಕ್ಷೇಪವನ್ನೂ ವ್ಯಕ್ತಪಡಿಸಿದರು.

ಮನಮೋಹನ್ ಸಿಂಗ್ ಅಂತ್ಯಕ್ರಿಯೆಯಲ್ಲಿ ಭೂತಾನ್ ದೊರೆ ಜಿಗ್ಮ್ ಖೇಸರ್ ಭಾಗಿಮನಮೋಹನ್ ಸಿಂಗ್ ಸ್ಮಾರಕಕ್ಕೆ ಸರ್ಕಾರ ಜಾಗ ಮಂಜೂರು ಮಾಡಲಿದೆ: ಗೃಹ ಸಚಿವಾಲಯ

ಕೊಚ್ಚಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ (ಸಿಐಎಲ್‌) ವತಿಯಿಂದ ನಿರ್ಮಿಸಿರುವ ತಾಜ್‌ ಕೊಚ್ಚಿನ್‌ ಪಂಚತಾರಾ ಹೋಟೆಲ್‌ ಅನ್ನು ವಿಜಯನ್‌ ಅವರು ಇಂದು ಉದ್ಘಾಟಿಸಿದರು.

ಮನಹೋಹನ್‌ ಸಿಂಗ್‌ ಅವರ ಅಂತ್ಯಕ್ರಿಯೆಯು ಸಕಲ ಸರ್ಕಾರಿ ಗೌರವಗಳೊಂದಿಗೆ ನವದೆಹಲಿಯಲ್ಲಿ ಇಂದು ನೆರವೇರಿತು.

ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪ ರಾಷ್ಟ್ರಪತಿ ಜಗದೀಪ್‌ ಧನಕರ್‌, ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್‌ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್‌ ಗಾಂಧಿ, ಸೋನಿಯಾ ಗಾಂಧಿ ಸೇರಿದಂತೆ ಹಲವು ಗಣ್ಯರು ಅಂತಿಮ ಗೌರವ ಸಲ್ಲಿಸಿದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries