ಚಂಡೀಗಢ: ಪ್ರತಿಭಟನೆ ನಡೆಸುತ್ತಿದ್ದ ರೈತರೊಂದಿಗೆ ಫೆ.14ಕ್ಕೂ ಮುಂಚಿತವಾಗಿ ಸಭೆ ನಡೆಸುವಂತೆ ಕಿಸಾನ್ ಮಜ್ದೂರ್ ಮೋರ್ಚಾ (ಕೆಎಂಎಂ) ಸೋಮವಾರ ಒತ್ತಾಯಿಸಿದೆ.
ಇದೇ ಸಂದರ್ಭದಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ನಿಲ್ಲಿಸುವಂತೆ ರೈತ ನಾಯಕ ಜಗಜಿತ್ ಸಿಂಗ್ ಡಲ್ಲೇವಾಲ್ ಅವರಲ್ಲಿ ಮನವಿ ಮಾಡಿದೆ.
ಕೆಎಂಎಂ, ಸಂಯುಕ್ತ ಕಿಸಾನ್ ಮೋರ್ಚಾ(ರಾಜಕೀಯೇತರ) ಖನೌರಿ ಮತ್ತು ಶಂಭು ಗಡಿಯಲ್ಲಿ ನಡೆಯುತ್ತಿದ್ದ ರೈತರ ಪ್ರತಿಭಟನೆಯ ನೇತೃತ್ವ ವಹಿಸಿದ್ದವು.
ಶನಿವಾರ ಕೃಷಿ ಸಚಿವಾಲಯದ ಜಂಟಿ ಕಾರ್ಯದರ್ಶಿ ಪ್ರಿಯಾ ರಂಜನ್ ನೇತೃತ್ವದ ಕೇಂದ್ರ ಸರ್ಕಾರದ ಉನ್ನತ ನಿಯೋಗವು ಡಲ್ಲೇವಾಲ್ ಮತ್ತು ಇತರ ರೈತ ನಾಯಕರನ್ನು ಭೇಟಿಯಾಗಿತ್ತು. ಫೆ.14ರಂದು ಚಂಡೀಗಢದಲ್ಲಿ ಮಾತುಕತೆಗೆ ಆಹ್ವಾನಿಸಿತ್ತು.





