ಮಂಜೇಶ್ವರ : ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 67 ನೇ ಗಣರಾಜ್ಯೋತ್ಸವವನ್ನು ಸರಳವಾಗಿ ಆಚರಿಸಲಾಯಿತು.
ಧ್ವಜಾರೋಹಣವನ್ನು ವಾರ್ಡ್ ಸದಸ್ಯ ಜನಾರ್ಧನ ಪೂಜಾರಿ ಕುಳೂರು ನೆರವೇರಿಸಿದರು. ಶಾಲಾ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಜಯರಾಜ್ ಶೆಟ್ಟಿ ಚಾರ್ಲ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಶಿಕ್ಷಕಿ ಮಾಲತಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮೊಹಮ್ಮದ್ ಹಾಜಿ ಕಂಚಿಲ, ಜೊತೆ ಕಾರ್ಯದರ್ಶಿ ಅಬ್ದುಲ್ ಮಜೀದ್ ಸಾಹೇಬ್ ಚಾರ್ಲ ಶುಭಹಾರೈಸಿದರು.
ಶಾಲಾ ವ್ಯವಸ್ಥಾಪನಾ ಸಮಿತಿ ಸದಸ್ಯರು, ಶಾಲಾ ಶಿಕ್ಷಕ ವೃಂದ, ಶಾಲಾ ಮಕ್ಕಳು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು. ಶಾಲಾ ಶಿಕ್ಷಕ ಜಯಪ್ರಶಾಂತ್ ಪಾಲೆಂಗ್ರಿ ಸ್ವಾಗತಿಸಿ, ಶಿಕ್ಷಕಿ ಸೌಮ್ಯ ಪಿ ವಂದಿಸಿದರು.

.jpg)
