HEALTH TIPS

ಕೇರಳ-ದೇವಾಲಯ ಪ್ರವೇಶ: ಪುರುಷರ ಮೇಲಂಗಿ ಕಳಚುವ ಪರಿಪಾಟ ನಿಲ್ಲಲಿ- ಸ್ವಾಮಿ ಸಚ್ಚಿದಾನಂದ

ತಿರುವನಂತಪುರ: 'ದೇವಸ್ಥಾನದೊಳಗೆ ಪ್ರವೇಶ ಪಡೆಯುವ ಮೊದಲು ಪುರುಷರು ಮೇಲಂಗಿ ಕಳಚಬೇಕು ಎಂಬ ಪರಿಪಾಟವನ್ನು ಕೈಬಿಡಬೇಕು' ಎಂದು ಸಾಮಾಜಿಕ ಸುಧಾರಕ ಶ್ರೀ ನಾರಾಯಣ ಗುರು ಅವರು ಸ್ಥಾಪಿಸಿದ ಶಿವಗಿರಿ ಮಠದ ಮುಖ್ಯಸ್ಥ ಸ್ವಾಮಿ ಸಚ್ಚಿದಾನಂದ ಅವರು ಕರೆ ನೀಡಿದರು.

ಮಂಗಳವಾರದ ನಡೆದ ಮಠದ ವಾರ್ಷಿಕ ತೀರ್ಥಯಾತ್ರೆಯ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಪಿಣರಾಯ್‌ ವಿಜಯನ್‌ ಅವರು ಕೂಡ ಸ್ವಾಮಿ ಸಚ್ಚಿದಾನಂದ ಅವರ ಮಾತನ್ನು ಬೆಂಬಲಿಸಿದರು.

'ಪುರುಷರು ಜನಿವಾರ ಹಾಕಿದ್ದಾರೆಯೇ ಇಲ್ಲವೇ ಎನ್ನುವುದನ್ನು ಪರೀಕ್ಷಿಸಲು ಮೇಲಂಗಿ ತೆಗೆಯಲು ಹೇಳಲಾಗುತ್ತಿತ್ತು. ಹೀಗೆ ಮಾಡುವುದು ಸಾಮಾಜಿಕ ಪಿಡುಗು. ಇದನ್ನು ಕೊನೆಗೊಳಿಸಲೇಬೇಕು. ನಾರಾಯಣ ಗುರುಗಳೂ ಈ ಪರಿಪಾಠದ ವಿರುದ್ಧ ಇದ್ದರು. ಆದರೂ 'ಶ್ರೀ ನಾರಾಯಾಣ ಧರ್ಮ ಪರಿಪಾಲನಾ ಯೋಗಂ'ನಂಥ ಸಂಸ್ಥೆಗಳಲ್ಲಿ ಈ ಪರಿಪಾಠವನ್ನು ಮುಂದುವರಿಸಲಾಗುತ್ತಿದೆ. ಈ ಬಗ್ಗೆ ಆ ಸಂಸ್ಥೆಯವರು ಮರುಪರಿಶೀಲಿಸಬೇಕು' ಎಂದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries