ಚೆನ್ನೈ: ವಿಶ್ವವಿದ್ಯಾಲಯಗಳ ಅನುದಾನ ಆಯೋಗದ (ಯುಜಿಸಿ) ನೂತನ ಕರಡು ನಿಯಮಾವಳಿಯಲ್ಲಿರುವ ಹಲವು ಅಂಶಗಳು ರಾಜ್ಯದ ಶೈಕ್ಷಣಿಕ ವ್ಯವಸ್ಥೆ ಮತ್ತು ನೀತಿಗಳೊಂದಿಗೆ ಸಂಘರ್ಷಕ್ಕಿಳಿಯುವಂತಿವೆ. ಹೀಗಾಗಿ ಕರಡನ್ನು ಹಿಂಪಡೆಯಬೇಕು ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರದಾನ್ ಅವರಿಗೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಸೋಮವಾರ ಪತ್ರ ಬರೆದಿದ್ದಾರೆ.
ಕರಡು ನಿಯಮಾವಳಿಗಳು ರಾಜ್ಯದ ವಿಶ್ವವಿದ್ಯಾಲಯಗಳ ಶೈಕ್ಷಣಿಕ ಸಾರ್ವಭೌಮತೆ, ಸ್ವಾಯತ್ತತೆ ಮತ್ತು ಅಭಿವೃದ್ಧಿಗೆ ಗಂಭೀರ ಸವಾಲೊಡ್ಡಲಿವೆ ಎಂದು ರಾಜ್ಯವು ಭಾವಿಸುತ್ತದೆ ಎಂದು ಅವರು ತಿಳಿಸಿದ್ದಾರೆ.
ಇದೇ ಸಂದರ್ಭದಲ್ಲಿ ಬಿಜೆಪಿಯೇತರ ಪಕ್ಷಗಳು ಅಸ್ತಿತ್ವದಲ್ಲಿರುವ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪ್ರತ್ಯೇಕ ಪತ್ರ ಬರೆದು, ಯುಜಿಸಿ ಕರಡು ನಿಯಮಾವಳಿಗಳನ್ನು ಹಿಂಪಡೆಯುವ ಸಂಬಂಧ ವಿಧಾನಸಭೆಗಳಲ್ಲಿ ನಿರ್ಣಯ ಮಂಡಿಸಲು ಕರೆ ನೀಡಿದ್ದಾರೆ.





