ತಿರುವನಂತಪುರಂ: ಮುಂದಿನ ಐದು ದಿನಗಳ ಕಾಲ ರಾಜ್ಯದ ವಿವಿಧ ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕೇಂದ್ರ ಹವಾಮಾನ ಇಲಾಖೆ ವಿವಿಧ ಜಿಲ್ಲೆಗಳಲ್ಲಿ ಯೆಲ್ಲೋ ಎಚ್ಚರಿಕೆ ನೀಡಿದೆ.
31 ರಂದು ತಿರುವನಂತಪುರಂ, ಕೊಲ್ಲಂ ಮತ್ತು ಪತ್ತನಂತಿಟ್ಟ ಜಿಲ್ಲೆಗಳಲ್ಲಿ ಯೆಲ್ಲೋ ಎಚ್ಚರಿಕೆ ಘೋಷಿಸಲಾಗಿದೆ. ಮುನ್ಸೂಚನೆಯ ಪ್ರಕಾರ, ಅಲ್ಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. 24 ಗಂಟೆಗಳಲ್ಲಿ 64.5 ಮಿ.ಮೀ ನಿಂದ 115.5 ಮಿ.ಮೀ ಮಳೆಯಾಗಿದ್ದರೆ ಅದನ್ನು ಭಾರೀ ಮಳೆ ಎಂದು ವ್ಯಾಖ್ಯಾನಿಸಲಾಗುತ್ತದೆ.
30 ಮತ್ತು 31 ರಂದು ಅಲ್ಲಲ್ಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಕೇಂದ್ರ ಹವಾಮಾನ ಇಲಾಖೆ ಘೋಸಿದ್ದು, ಎಚ್ಚರಿಕೆ ಸೂಚನೆಗಳನ್ನು ಸಹ ನೀಡಿದೆ. ಕೇಂದ್ರ ಹವಾಮಾನ ಇಲಾಖೆ ಅಭಿವೃದ್ಧಿಪಡಿಸಿರುವ 'ದಾಮಿನಿ' ಮೊಬೈಲ್ ಅಪ್ಲಿಕೇಶನ್ ಬಳಸಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯನ್ನು ಅರ್ಥಮಾಡಿಕೊಳ್ಳಬಹುದು. ದಾಮಿನಿ ಆಪ್ ಅನ್ನು https://play.google.com/store/apps/details?id=com.lightening.live.damini&hl=en_IN ಲಿಂಕ್ ನಿಂದ ಡೌನ್ಲೋಡ್ ಮಾಡಿಕೊಳ್ಳಬಹುದು ಮತ್ತು ಬಳಸಬಹುದು.





